ನಮ್ಮ ಪಕ್ಷಕ್ಕೆ ಚೂರಿ ಹಾಕಿ, ಜೆಡಿಎಸ್ ಪಕ್ಷವನ್ನ ಮುಗಿಸಲೆಬೇಕೆಂದು ಹೊರಟಿದ್ದ ನಾಯಕರ ಪಾಪದಕೊಡ ತುಂಬಿದೆ: ಹೆಚ್ಡಿಕೆ | ಜನತಾ ನ್ಯೂಸ್
ರಾಮನಗರ : ಜೆಡಿಎಸ್ ಪಕ್ಷವನ್ನು ಮುಗಿಸಲೇಬೇಕೆಂದು ಹೊರಟಂತ ನಾಯಕರ ಪಾಪದ ಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದಾರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಗುಡುಗಿದ್ದಾರೆ.
ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದಲ್ಲಿ ವಲಸೆ ಹಾಗೂ ಮೂಲ ಎಂಬ ಜಗಳ ಇಲ್ಲಿಗೆ ನಿಲ್ಲೊದಿಲ್ಲಾ. ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ಪ್ರಾರಂಭವಾಗಿದೆ. ಜೆಡಿಎಸ್ ಪಕ್ಷವನ್ನ ಮುಗಿಸಲೆಬೇಕೆಂದು ಹೊರಟ ನಾಯಕರ ಪಾಪದಕೊಡ ತುಂಬಿದೆ. ನಮ್ಮ ಪಕ್ಷಕ್ಕೆ ಚೂರಿ ಹಾಕಿ ಹೋಗಿದ್ದರಲ್ಲಾ ಅವರ ಪಾಪದ ಕೊಡ ತುಂಬಿದೆ ಎಂಬುದಾಗಿ ಹೇಳುವ ಮೂಲಕ, ಮಾಜಿ ಸಿಎಂ ಸಿದ್ದರಾಮಯ್ಯ ಹೆಸರಳೇದೆ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.
ಇವರಿಗೆಲ್ಲಾ ರಾಜ್ಯದ ಜನತೆ ಪಾಠ ಕಲಿಸುವ ಸಮಯ ದೂರ ಇಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ. ಅಲ್ಲಿಯವರೆಗೆ ಕಾದು ನೋಡಬೇಕೆ ಎಂಬುದಾಗಿ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ- ಕೇರಳ ಗಡಿ ಭಾಗದ ಗ್ರಾಮಗಳ ಹೆಸರು ಬದಲಾವಣೆ ಟ್ವೀಟ್ ಮಾಡಿ ಗಮನಸೆಳೆದಿದ್ದೇನೆ. ಕೇರಳ ಮುಖ್ಯಮಂತ್ರಿಗೆ ನಮ್ಮ ಸಿಎಂ ಪತ್ರ ಬರೆದಿದ್ದಾರೆ. ನಾನು ಸಹ ಈ ಬಗ್ಗೆ ಪತ್ರವನ್ನು ಬರೆದಿದ್ದೇನೆ. ಅವರು ಆ ರೀತಿಯ ಬೆಳವಣಿಗೆ ಏನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೇರಳ ಸರ್ಕಾರದವರು ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ. ಆದರೆ ಇಂತಹ ವಿಚಾರಗಳು ಬಂದಾಗ ಎಚ್ಚರಿಕೆ ವಹಿಸಬೇಕು. ರಾಜ್ಯ ಸರ್ಕಾರ ನಾಡು, ನುಡಿ, ಜಲದ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು.