ಕಾಂಗ್ರೆಸ್ ನಲ್ಲಿ ಯಾವುದೇ ಬಣ ಇಲ್ಲ, ಯಾವ ಜಗಳನೂ ಇಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ನಮ್ಮ ಪಕ್ಷದಲ್ಲಿ ಯಾವುದೇ ಬಣ ರಾಜಕಾರಣ ಇಲ್ಲ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ "ಕಾಂಗ್ರೆಸ್ ಬದುಕಿದೆ" ಎಂಬ ಹೇಳಿಕೆ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದರ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ ಎಂದರು. ಕೆಲವು ನಾಯಕರ ಹೈಕಮಾಂಡ್ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ಭೇಟಿ ಮಾಡಿದ್ದು ನನಗೆ ಗೊತ್ತಿಲ್ಲ.ಯಾವ ವಿಚಾರಕ್ಕೆ ಭೇಟಿ ಮಾಡಿದ್ದಾರೆ ಅಂತ ನನಗೆ ಗೊತ್ತಿಲ್ಲ.ನಾನು ಪಕ್ಷದ ಯಾವುದೇ ವಿಚಾರಕ್ಕೆ ಬಹಿರಂಗವಾಗಿ ಚರ್ಚೆ ಮಾಡಲ್ಲ ಎಂದರು.
ಸದ್ಯಕ್ಕೆ ನಾನು ದೆಹಲಿಗೆ ಹೋಗಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸಮನ್ವಯ ಸಮಿತಿ ರಚನೆ ಪಕ್ಷದವರು ಮಾಡ್ತಾರೆ ಬಿಡಿ ಅದು ಮಾಡಿದಾಗ ನಿಮಗೆ ಹೇಳೇ ಹೇಳ್ತಾರೆ.ಪಕ್ಷದಲ್ಲಿ ಯಾವುದೆ ಬಣಗಳು ಇಲ್ಲ, ಯಾವುದೇ ಜಗಳಾನೂ ಇಲ್ಲ ಹೀಗಿದ್ದಾಗ ಸಮನ್ವಯ ಸಮಿತಿ ಮಾಡ್ತಾರೆ ಅಂತ ಹುಟ್ಟು ಹಾಕಿದವರು ಯಾರು? ಎಂದು ಪ್ರಶ್ನಿಸಿದರು.
ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಬರಬಹುದು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಜುಲೈ, ಆಗಸ್ಟ್, ಸೆಪ್ಟೆಂಬರ್ ಮೂರು ತಿಂಗಳು ಇದೆ. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು.ಬೆಡ್ ಆಕ್ಸಿಜನ್ ಎಲ್ಲವೂ ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.