ಊಟ ಮಾಡಿಸೋ ವೇಳೆ ತೆಂಗಿನ ಕಾಯಿ ಬಿದ್ದು ಮಗು ಸಾವು | ಜನತಾ ನ್ಯೂಸ್
ಹಾವೇರಿ : ತಲೆಯ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಮೃತಪಟ್ಟ ವಿದ್ರಾವಕ ಘಟನೆ ಜಿಲ್ಲೆಯ ಹಿರೆಕೇರೂರು ತಾಲೂಕಿನ ಹಂಸಭಾವಿಯಲ್ಲಿ ನಡೆದಿದೆ.
ತನ್ವಿತ್ ಮಲ್ಲಿಕಾರ್ಜುನ ವಾಲ್ಮೀಕಿ ಮೃತ ಮಗು. ಸೋಮವಾರ ಬೆಳೆಗ್ಗೆ ಮಗು ಆಟವಾಡುತ್ತಾ ಊಟ ಮಾಡುವ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬಂದಾಗ ಮರದಲ್ಲಿದ್ದ ತಲೆಯ ಮೇಲೆ ತೆಂಗಿನಕಾಯಿ ಬಿದ್ದಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ, ಚಿಕಿತ್ಸೆ ಫಲಿಸದೇ ಮಗು ಸಂಜೆ ವೇಳೆಗೆ ಮೃತಪಟ್ಟಿದೆ.
ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹಂಸಭಾವಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
RELATED TOPICS:
English summary :Haveri