ಕೊರೊನಾದಿಂದ ತಾಯಿ ಬಲಿ: ನೊಂದ ಇಬ್ಬರು ಹೆಣ್ಣು ಮಕ್ಕಳು-ಪತಿ ಆತ್ಮಹತ್ಯೆ! | ಜನತಾ ನ್ಯೂಸ್
ಬೆಂಗಳೂರು : ಕೊರೊನಾ ಇಡೀ ಕುಟುಂಬವನ್ನೇ ಬಲಿ ಪಡೆದುಕೊಂಡಿದೆ. ತಾಯಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆನೇಕಲ್ ನ ಅತ್ತಿಬೆಲೆಯ ಅಂಬೇಡ್ಕರ್ ಕಾಲೋನಿಯಲ್ಲಿ ಈ ಮನಕಲಕುವ ಘಟನೆ ನಡೆದಿದೆ. 40 ವರ್ಷದ ಸತೀಶ್, 19 ವರ್ಷದ ಮೋನಿಷ ಹಾಗೂ 17 ವರ್ಷದ ಮತ್ತೊಬ್ಬರು ನೇಣಿಗೆ ಶರಣಾಗಿದ್ದಾರೆ.
ಸತೀಶ್ ರೆಡ್ಡಿ ಅವರ ಪತ್ನಿ ಆಶಾ ಅವರ ಕೊರೊನಾ ರಿಪೋರ್ಟ್ ಪಾಸಿಟಿವ್ ಬಂದಿತ್ತು. ಚಿಕಿತ್ಸೆಯ ಬಳಿಕವೂ ಚೇತರಿಸಿಕೊಳ್ಳದ ಆಶಾ ಅವರು ಮೇ 6ರಂದು ಕೊರೊನಾಗೆ ಬಲಿಯಾಗಿದ್ದರು. ಪತಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದರು. ಪುಟ್ಟ ಕುಟುಂಬಕ್ಕೆ ಬರ ಸಿಡಿಲು ಬಡಿದಂತೆ ಆಗಿತ್ತು. ಪತ್ನಿಯನ್ನು ಕಳೆದುಕೊಂಡು ಸತೀಶ್ ರೆಡ್ಡಿ ಕಂಗಾಲಾಗಿದ್ದರು. ತಾಯಿಯ ಸಾವಿನಿಂದ ಇಬ್ಬರು ಹೆಣ್ಣು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಮೂವರು ನೇಣಿಗೆ ಶರಣಾಗಿದ್ದಾರೆ.