Fri,Apr26,2024
ಕನ್ನಡ / English

ಏಷ್ಯಾದ ಅತಿ ಉದ್ದದ ಹೈಸ್ಪೀಡ್ ಟ್ರ್ಯಾಕ್ ಲೋಕಾರ್ಪಣೆ : ವಾಹನಗಳ ಹೈಸ್ಪೀಡ್ ಕಾರ್ಯಕ್ಷಮತೆ ಪರೀಕ್ಷೆ ಈಗ ಭಾರತದಲ್ಲೇ ಸಾಧ್ಯ | ಜನತಾ ನ್ಯೂಸ್

30 Jun 2021
1565

ಇಂದೋರ್ : ನ್ಯಾಟ್ರಾಕ್ಸ್- ಹೈ ಸ್ಪೀಡ್ ಟ್ರ್ಯಾಕ್(ಎಚ್‌ಎಸ್‌ಟಿ), ಏಷ್ಯಾದ ಅತಿ ಉದ್ದದ ಹೈಸ್ಪೀಡ್ ಟ್ರ್ಯಾಕ್ ಅನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ಇಂದು ಬುಧವಾರ ಉದ್ಘಾಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತದ ಅಡಿಯಲ್ಲಿ ಈ ಟ್ರ್ಯಾಕ್ ನಿರ್ಮಿಸಲಾಗಿದ್ದು, ಈಗ ಭಾರತದ ವಾಹನಗಳನ್ನು ಭಾರತದಲ್ಲಿಯೇ ಪರೀಕ್ಷಿಸಬಹುದಾದ ಕಾರಣದಿಂದ, ವಾಹನಗಳನ್ನು ವಿದೇಶಕ್ಕೆ ಕಳುಹಿಸುವ ಅಗತ್ಯವಿರುವುದಿಲ್ಲ. ಈ ಮೂಲಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಾಹನ ತಯಾರಕರು ಸಹ ತಮ್ಮ ವಾಹನಗಳನ್ನು ಈ ಬೃಹತ್ ಟ್ರ್ಯಾಕ್‌ನಲ್ಲಿ ಪರೀಕ್ಷಿಸಲು ಸಾಧ್ಯವಾಗಲಿದೆ.

ಬೃಹತ್ ಕೈಗಾರಿಕೆಗಳು ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಪ್ರಕಾಶ್ ಜಾವಡೇಕರ್ ಅವರು ಇಂದೋರ್‌ನಲ್ಲಿ ನ್ಯಾಟ್ರಾಕ್ಸ್- ಹೈ ಸ್ಪೀಡ್ ಟ್ರ್ಯಾಕ್(ಎಚ್‌ಎಸ್‌ಟಿ)ಯನ್ನು ಉದ್ಘಾಟಿಸಿದರು, ಇದು ಏಷ್ಯಾದ ಅತಿ ಉದ್ದದ ಟ್ರ್ಯಾಕ್ ಆಗಿದೆ. 1000 ಎಕರೆ ಪ್ರದೇಶದಲ್ಲಿ ಅಭಿವೃದ್ಧಿಪಡಿಸಿದ ನ್ಯಾಟ್ರಾಕ್ಸ್, ದ್ವಿಚಕ್ರ ವಾಹನಗಳಿಂದ ಹಿಡಿದು ಹೆವಿ ಟ್ರಾಕ್ಟರ್ ಟ್ರೇಲರ್‌ಗಳವರೆಗಿನ ವ್ಯಾಪಕ ವರ್ಗದ ವಾಹನಗಳಿಗೆ ಎಲ್ಲಾ ರೀತಿಯ ಹೈಸ್ಪೀಡ್ ಕಾರ್ಯಕ್ಷಮತೆ ಪರೀಕ್ಷೆಗಳಿಗೆ ಒಂದು ಸಂಪೂರ್ಣ ಪರಿಹಾರವಾಗಿದೆ.

ವಿಶ್ವ ದರ್ಜೆಯ 11.3 ಕಿ.ಮೀ ಹೈ ಸ್ಪೀಡ್ ಟ್ರ್ಯಾಕ್‌ನ ಇ-ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಜಾವಡೇಕರ್ ಅವರು, ಭಾರತವು ವಾಹನಗಳು, ಉತ್ಪಾದನೆ ಮತ್ತು ಬಿಡಿಭಾಗಗಳ ಕೇಂದ್ರವಾಗಲು ಉದ್ದೇಶಿಸಲಾಗಿದೆ, ಎಂದು ಹೇಳಿದರು. ಸಚಿವರು ಮಾತನಾಡಿ, ನಾವು ವೇಗವಾಗಿ "ಆತ್ಮನಿರ್ಭರ ಭಾರತ" ಕಡೆಗೆ ಸಾಗುತ್ತಿದ್ದೇವೆ ಮತ್ತು ಈ ದಿಕ್ಕಿನಲ್ಲಿ ಎಲ್ಲ ಸುತ್ತಿನ ಪ್ರಯತ್ನಗಳು ನಡೆಯುತ್ತಿವೆ. ಭಾರತವು ವಾಹನ ತಯಾರಿಕೆಯ ಕೇಂದ್ರವಾಗುವುದನ್ನು ಖಾತ್ರಿಪಡಿಸಿಕೊಳ್ಳುವ ಪ್ರಧಾನ ಮಂತ್ರಿಯ ಕನಸನ್ನು ಈಡೇರಿಸಲು ಅವರ ಸಚಿವಾಲಯ ಬದ್ಧವಾಗಿದೆ, ಎಂದು ಅವರು ಹೇಳಿದರು. ವಾಹನಗಳು ಮತ್ತು ಉತ್ಪಾದನಾ ಕೈಗಾರಿಕೆಗಳನ್ನು ವಿಸ್ತರಿಸುವುದರಿಂದ ಉದ್ಯೋಗ ಸೃಷ್ಟಿಸಲು ಸಹಾಯವಾಗುತ್ತದೆ, ಎಂದರು.

ದಶಕಗಳಿಂದ ನೆನೆಗುದಿಗೆ ಬಿದ್ದ ರೈಲ್ವೆ, ಹೆದ್ದಾರಿಗಳು ಮತ್ತು ಜಲಮಾರ್ಗಗಳಲ್ಲಿನ ಯೋಜನೆಗಳು ಇಂದು ಬಲವಾದ ರಾಜಕೀಯ ಇಚ್ಚಾಶಕ್ತಿಯಿಂದಾಗಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳುತ್ತಿವೆ, ಎಂದು ಸಚಿವರು ಹೇಳಿದರು.

RELATED TOPICS:
English summary :Asian longest high speed track inaugurated : Vehicles high speed performance test now possible in India

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...