ಭಟ್ಕಳದಲ್ಲಿ ಹೊತ್ತಿ ಉರಿದ ಜೆಎಂಎಫ್ಸಿ ಕೋರ್ಟ್: ದಾಖಲೆಗಳು ಅಗ್ನಿಗಾಹುತಿ | ಜನತಾ ನ್ಯೂಸ್
ಉತ್ತರಕನ್ನಡ : ತಾಲೂಕಿನ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ದಾಖಲಾತಿ, ಕಡತಗಳು ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ. ನಗರದಲ್ಲಿ ರಾತ್ರಿ ಭಾರಿ ಮಳೆ ಸುರಿದಿದೆ. ಇದರ ನಡುವೆ ಬೆಂಕಿ ಕಾಣಿಸಿದೆ. ಬೆಳಗ್ಗೆ ಪ್ರಾರ್ಥನೆಗೆ ತೆರಳುತ್ತಿರುವವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ನಸುಕಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ದಾಖಲಾತಿಗಳು ಸುಟ್ಟು ಬೂದಿಯಾಗಿವೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಬೆಂಕಿಯ ಕೆನ್ನಾಲಿಗೆಗೆ ನ್ಯಾಯಾಲಯದ ಮೇಲ್ಛಾವಣಿ ಸುಟ್ಟು ಹೋಗಿದೆ. ಜತೆಗೆ ಟೇಬಲ್, ಖುರ್ಚಿ, ಬೀರುಗಳು ಸೇರಿದಂತೆ ದಾಖಲೆ ಪತ್ರಗಳು ಸುಟ್ಟು ಕರಕಲಾಗಿವೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗುಲಿರಬಹುದೆಂದು ಶಂಕಿಸಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.