ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ: ಹತ್ಯೆಗೆ ಪತ್ನಿಯೇ ಕೊಟ್ಟಳಾ ಸುಪಾರಿ? | ಜನತಾ ನ್ಯೂಸ್
ಬೆಂಗಳೂರು : ಬೆಂಗಳೂರು ನಗರದಲ್ಲಿ ವ್ಯಕ್ತಿಯೋರ್ವನ ಭೀಕರವಾಗಿ ಹತ್ಯೆಗೈಯಲಾಗಿದೆ. ಕಾವಲ್ ಭೈರಸಂದ್ರದ ಅಂಬೇಡ್ಕರ್ ಕಾಲೇಜಿನ ಎದುರು ಕೃಷ್ಣಮೂರ್ತಿ(30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ಟೈಲ್ಸ್ ವರ್ಕ್ ಮಾಡುತ್ತಿದ್ದ ಕೃಷ್ಣಮೂರ್ತಿ ಹತ್ಯೆಯ ಹಿಂದೆ ಆತನ ಪತ್ನಿಯ ಕೈವಾಡ ಶಂಕೆಯೂ ಇದೆ ಎನ್ನಲಾಗುತ್ತಿದೆ. ಇಬ್ಬರು ಅಥವಾ ಮೂವರು ವ್ಯಕ್ತಿಗಳು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಕೃಷ್ಣಮೂರ್ತಿ ಇತ್ತೀಚೆಗೆ ತನ್ನ ಮೊದಲ ಪತ್ನಿಯನ್ನು ತೊರೆದು ಎರಡನೇ ಮದುವೆಯಾಗಿದ್ದ. ಎರಡು ತಿಂಗಳಿನಿಂದ ಎರಡನೇ ಪತ್ನಿ ಜೊತೆ ಪ್ರತಿನಿತ್ಯ ಗಲಾಟೆ ನಡೆಯುತ್ತಿತ್ತು. ಈ ವಿವಾದ ಪೊಲೀಸ್ ಠಾಣೆ ಮೆಟ್ಟಿಲೂ ಏರಿತ್ತು.
ಈ ವೇಳೆ ಪೊಲೀಸರು ಎರಡು ಮೂರು ಬಾರಿ ಗಂಡ ಹೆಂಡತಿಗೆ ಎಚ್ಚರಿಕೆ ನೀಡಿ ಕಳಿಸಿದ್ದರು. ಹೀಗಾಗಿ ಗಂಡನ ಕಿರುಕುಳ ತಾಳದೆ ಹೆಂಡತಿಯೇ ಸುಪಾರಿ ನೀಡಿ ಕೊಲೆ ಮಾಡಿಸಿರುವ ಶಂಕೆಯೂ ಇದೆ.