ಸೌತ್ ಇಂಡಿಯಾ ಸಿಮೆಂಟ್ ಉತ್ಪಾದಕರ ಸಂಘದಿಂದ 100 ಆಕ್ಸಿಜನ್ ಕಾನ್ಸಂಟ್ರೇಟರ್ಸ ಸಿಎಂ ಗೆ ಹಸ್ತಾಂತರ | ಜನತಾ ನ್ಯೂಸ್
ಬೆಂಗಳೂರು : ಸೌತ್ ಇಂಡಿಯಾ ಸಿಮೆಂಟ್ ಮ್ಯಾನ್ಯುಫ್ಯಾಕ್ಚರರ್ಸ್ ಅಸೋಸಿಯೇಷನ್ ವತಿಯಿಂದ 100 ಆಕ್ಸಿಜನ್ ಕಾನ್ಸಂಟ್ರೇಟರ್ಸಗಳನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕೋವಿಡ್-19 ಎರಡನೇ ಅಲೆ ಅತಿಹೆಚ್ಚು ದಾಖಲಾಗಿದ್ದ ಮೇ ತಿಂಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ಸಗಳಿಗೆ ಭಾರಿ ಬೇಡಿಕೆ ವ್ಯಕ್ತವಾಗಿತ್ತು. ಇತರೆ ವೈದ್ಯಕೀಯ ಸಾಮಗ್ರಿಗಳೊಂದಿಗೆ ದ್ರವ ರೂಪದ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರ್ಸಗಳನ್ನು ವಿದೇಶಗಳಿಂದ ಭಾರತೀಯ ವಾಯುಸೇನೆ ಹಾಗೂ ನೌಕಾಪಡೆ ಸರಬರಾಜು ಮಾಡುತಿದ್ದನ್ನು ಇಲ್ಲಿ ಸ್ಮರಿಸಬಹುದು.
ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ಇಂದು ಶನಿವಾರ 2,082 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 481 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 55 ಪಾಸಿಟಿವ್ ಪ್ರಕರಣ ದಾಖಲಾಗಿದೆ.