ಹನಿಟ್ರ್ಯಾಪ್ ಪ್ರಕರಣ ಬಯಲಿಗೆ: ಯುವತಿ ಬಂಧನ, ಆರು ಮಂದಿಗೆ ಹುಡುಕಾಟ | ಜನತಾ ನ್ಯೂಸ್
ಪುತ್ತೂರು : ವ್ಯಕ್ತಿಯೊಬ್ಬ ಹನಿಟ್ರ್ಯಾಪ್ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಈ ಬಗ್ಗೆ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಯುವತಿಯೋರ್ವಳನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್ಗೆ ಒಳಗಾದ ಯುವಕ. ಇವರು ವಂಚಕರಿಂದ 30 ಲಕ್ಷ ರೂ. ಕಳೆದುಕೊಂಡಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, ಸಯೀದ್ ಮೋನು, ನಾಸಿರ್ ಮತ್ತು ಕಾರ್ಕಳದವಳೆಂದು ಪರಿಚಯಿಸಿಕೊಂಡಿದ್ದ ತನೀಶಾ ಎಂಬವರ ವಿರುದ್ಧ ಅಬ್ದುಲ್ ನಾಸಿರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣದ ತನಿಖೆ ಕೈಗೆತ್ತಿಗೊಂಡ ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ. ಕುಮಾರ್ ನೇತೃತ್ವದ ಪೊಲೀಸರು ಆರೋಪಿಗಳ ಪೈಕಿ ತನೀಶಾ ಎಂಬ ಯುವತಿಯನ್ನು ಬಂಧಿಸಿದ್ದಾರೆ. ಉಳಿದ ಆರು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.