ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ: ಸಚಿವ ಮಾಧುಸ್ವಾಮಿ | ಜನತಾ ನ್ಯೂಸ್
ಉಡುಪಿ : ಕರೊನಾ ಲಸಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರೆ ನಿಮಗೆ ಒಳ್ಳೆಯದಾಗುವುದಿಲ್ಲ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದರು.
ಹಡಿಲುಭೂಮಿ ಕೃಷಿ ಆಂದೋಲನಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ದೂರಿದರೆ ಒಳ್ಳೆಯದಾಗಲ್ಲ. 80 ಕೋಟಿ ಜನರಿಗೆ ಉಚಿತ ಲಸಿಕೆ ಕೊಡುವುದು ಸುಲಭವಲ್ಲ. ಟೀಕೆ ಮಾಡಬೇಕು ಸರಿ, ಆದರೆ ಇದು ನೈಸರ್ಗಿಕ ವಿಪತ್ತು. ಎಲ್ಲರೂ ಒಟ್ಟಾಗಿ ಎದುರಿಸಬೇಕು ಎಂದು ಹೇಳಿದ್ದಾರೆ.
ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ. ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ ಹೀಗಾಗಿ ವಿರೋಧ ಮಾಡುತ್ತಾರೆಂದು ಕಿಡಿಕಾರಿದರು.