Fri,Apr26,2024
ಕನ್ನಡ / English

ನಾಯಕತ್ವ ಬದಲಾವಣೆ ಹಾದಿ ಬೀದಿಯ ಚರ್ಚೆ ವಿಷಯವಲ್ಲ: ನಳಿನ್ ಕುಮಾರ್ ಕಟೀಲ್ | ಜನತಾ ನ್ಯೂಸ್

05 Jul 2021
2489

ಹಾವೇರಿ: : ನಾಯಕತ್ವದ ಚರ್ಚೆಯನ್ನ ಹಾದಿ ಬೀದಿಯಲ್ಲಿ ಮಾಡುವಂಥದ್ದಲ್ಲ. ಶಾಸಕಾಂಗ ಸಭೆಗಳನ್ನ ಕರೆಯುತ್ತದೆ. ಅಲ್ಲಿ ಚರ್ಚೆ ನಡೆಸಬೇಕು. ಅದನ್ನು ಬಿಟ್ಟು ದಾರಿಯಲ್ಲಿ ಮಾತನಾಡಿದರೆ ನಾಯಕತ್ವ ಬದಲಾವಣೆ ಆಗೋದಿಲ್ಲ ಎಂದು ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿಕೆ ನೀಡಿದರು.

ಹಿರೇಕೇರೂರಿನಲ್ಲಿ ಮಾತನಾಡಿದ ಅವರು. ಕಾಂಗ್ರೆಸ್ ಮುಳುಗುವ ಹಡಗು. ಕಾಂಗ್ರೆಸ್ ಹಡಗಿಗೆ ತೂತು ಬಿದ್ದಿದೆ. ಯಾವಾಗ ಮುಳುಗುತ್ತೋ ಗೊತ್ತಿಲ್ಲ. ಯಾರಾದರೂ ಬಂದು ರಕ್ಷಿಸಲಿ ಎಂದು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಮುಳುಗುವ ಹಡಗನ್ನು ಹತ್ತುವ ಜನ ಇಲ್ಲ. ಹೀಗಾಗಿ ಯಾವ ಪಕ್ಷದವರಾದರೂ ನಮ್ಮ ಹಡಗು ಹತ್ತಲಿ ಎಂದು ಬಾಂಬೆ ಟೀಂ ಶಾಸಕರಿಗೆ ಡಿ.ಕೆ ಶಿವಕುಮಾರ್ ಮತ್ತ ಕಾಂಗ್ರೆಸ್ ಪಕ್ಷ ಸೇರಿ ಎಂಬ ಆಫರ್ ನೀಡಿದೆ ಎಂದರು.

ಯತ್ನಾಳ ಅವರ ಆಗಸ್ಟ್​ನಲ್ಲಿ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಹೇಳಿಕೆಯ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆಯ ಕುರಿತಂತೆ ಯಾವುದೇ ಗೊಂದಲಗಳು ಬೇಡ, ನಾಯಕತ್ವ ಬದಲಾವಣೆ ಅಥವಾ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಸಿಎಂ ನಿವಾಸದ ಹಿಂದೆ ನೂರಾರು ಕೋಟಿ ರೂಪಾಯಿ ಅವ್ಯವಹಾರ ನಡೆಯುತ್ತದೆ ಎಂಬ ಯತ್ನಾಳ್ ಅವರ ಆರೋಪಕ್ಕೆ ಪ್ರತಿಯಾಗಿ, ಯತ್ನಾಳ್ ಅವರ ಹೇಳಿಕೆಗಳಿಗೆ ನಾನು ಹೆಚ್ಚು ಗೌರವಗಳನ್ನು ಕೊಡುವುದಿಲ್ಲ ಎಂದು ಕಟೀಲ್ ಹೇಳಿದರು.

ಯೋಗೇಶ್ವರ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಅವರು ಯಾವ ರೀತಿಯಾದ ಭಾವನೆಯಲ್ಲಿ ಮಾತನಾಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಅದರ ವಿವರಣೆಯನ್ನು ಕೇಳುತ್ತೇನೆ. ಮಾಧ್ಯಮಗಳ ಮುಂದೆ ನಮ್ಮ ಸರ್ಕಾರ, ನಮ್ಮ ಮಂತ್ರಿಗಳು ಹಾಗೂ ಶಾಸಕರು ಮಾತನಾಡಬಾರದು. ಜನರ ಪ್ರಾಣ ರಕ್ಷಣೆಯ ಕೆಲಸ ಮಾಡಲು ಸರ್ಕಾರಕ್ಕೆ ಆಶೀರ್ವಾದ ಮಾಡಿದ್ದಾರೆ. ಯೋಗೇಶ್ವರ್‌ ಏನು ಹೇಳಿದ್ದಾರೆ ಎನ್ನುವ ವಿವರಣೆ ಪಡೆದುಕೊಳ್ಳುತ್ತೇನೆ" ಎಂದು ಹೇಳಿದ್ದಾರೆ.

"ಬಿಜೆಪಿಯಲ್ಲಿ ಸದ್ಯ ನಾಯಕತ್ವ ಬದಲಾವಣೆ ಹಾಗೂ ಸಿಎಂ ಬದಲಾವಣೆಯ ಬಗ್ಗೆ ಚರ್ಚೆ ಇಲ್ಲ. ಹಾದಿ-ಬೀದಿಯಲ್ಲಿ ನಾಯಕತ್ವದ ಚರ್ಚೆ ಮಾಡುವಂತದಲ್ಲ.ದಾರಿಯಲ್ಲಿ ಮಾತನಾಡಿದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ. ಇದಕ್ಕಾಗಿ ಶಾಸಕಾಂಗ ಸಭೆ ಕರೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ-ಕಾರ್ಯಗಳಿಗೆ ಜನರು ಆಶೀರ್ವದಿಸಿದ್ದಾರೆ.ಇವರ ದುರಹಂಕಾರದ ಕಾರಣದಿಂದ ಲೋಕಸಭೆಯಲ್ಲಿ ವಿರೋಧ ಪಕ್ಷದ ಯೋಗ್ಯತೆಯನ್ನೂ ಕೊಟ್ಟಿಲ್ಲ. ಈ ಬಗ್ಗೆ ಅರಿತು ಮಾತನಾಡಬೇಕು" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Nalin Kumar Kateel

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...