ವಕೀಲರ ವೇಷ ತೊಟ್ಟು ಕೊಲೆ ಆರೋಪಿಗಳು ಕೋರ್ಟ್ ಮುಂದೆ ಶರಣು | ಜನತಾ ನ್ಯೂಸ್
ಬೆಂಗಳೂರು : ಫೈನಾನ್ಸ್ ವಹಿವಾಟು ನಡೆಸುತ್ತಿದ್ದ ವ್ಯಕ್ತಿಯನ್ನು ಹಾಡ ಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳು ವಕೀಲರ ಸೋಗಿನಲ್ಲಿ ವೇಷ ಧರಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿದ್ದಾರೆ.
ಹಾಡಹಗಲೇ ಫೈನಾನ್ಶಿಯರ್ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳು ಇಂದು ಬೆಳಗ್ಗೆಯೇ ವಕೀಲರ ವೇಷ ಧರಿಸಿ ನಗರದ ಎಸಿಎಂಎಂ ಕೋರ್ಟ್ನ ಹಾಲ್ನಲ್ಲಿ ಹಾಜರಾಗಿದ್ದಾರೆ.
ಜುಲೈ 2 ರಂದು ಬನಶಂಕರಿ ಮೆಟ್ರೋ ನಿಲ್ದಾಣದ ಕೆಳಗೆ ಫೈನಾನ್ಸಿಯರ್ ಮದನ್ ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಜಯನಗರ ಠಾಣೆ ಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ಆರಂಭ ಮಾಡಿದ್ದರು.
ಕಾರಿನಲ್ಲಿ ಕೂತಿದ್ದ ಮದನ್ ಎಂಬಾತನನ್ನು ಕೊಲ್ಲುವ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿತ್ತು. ಘಟನೆ ಕುರಿತು ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಬರುವಷ್ಟರಲ್ಲಿ ಆರೋಪಿಗಳು ಪರಾರಿಯಾಗಿದ್ದರು.
ಕೊಲೆಯಾಗಿದ್ದ ವ್ಯಕ್ತಿ ಮದನ್ ಎಂಬಾತ. ಹಣಕಾಸು ವಹಿವಾಟು ಹಿನ್ನೆಲೆಯಲ್ಲಿ ಆಡುಗೋಡಿಯ ನಿವಾಸಿ ಮದನ್ನನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆರೋಪಿಗಳು ಬೈಕ್ನಲ್ಲಿ ಬಂದು ಕೃತ್ಯ ಎಸಗಿದ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಹೀಗಾಗಿ ಹಂತಕ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಹತ್ಯೆ ಮಾಡುವ ಸಿಸಿಟಿವಿ ಕ್ಯಾಮರಾ ದೃಶ್ಯ ವೈರಲ್ ಆಗಿದೆ.
ವಕೀಲರಂತೆ ವೈಟ್ ಶರ್ಟ್, ಬ್ಲಾಕ್ ಪ್ಯಾಂಟ್ ಧರಿಸಿ ನ್ಯಾಯಾಲಯ ಎದುರು ಹಾಜರಾಗಿದ್ದಾರೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆಯಲು ಜಯನಗರ ಠಾಣೆ ಪೊಲೀಸರು ಮುಂದಾಗಿದ್ದಾರೆ.