ಸಿಧು ಭೇಟಿ ಬೆನ್ನಲ್ಲೇ ಸೋನಿಯಾ ಭೇಟಿ ಮಾಡಲಿರುವ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ | ಜನತಾ ನ್ಯೂಸ್
ನವದೆಹಲಿ : ಪಂಜಾಬ್ ಕಾಂಗ್ರೆಸ್ ಪಕ್ಷದೊಳಗಿನ ಜಗಳ ದಿನೇದಿನೇ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಲಿದ್ದಾರೆ.
ಮಾಜಿ ಕ್ರಿಕೆಟಿಗ-ರಾಜಕಾರಣಿ ಸಿಧು ಮತ್ತು ಅಮರಿಂದರ್ ಪರಸ್ಪರ ಜಗಳ ತಾರಕಕ್ಕೇರಿದ್ದು, ಪಕ್ಷದ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದ್ದು, ಕಾಂಗ್ರೆಸ್ ಶಾಸಕ ನವಜೋತ್ ಸಿಂಗ್ ಸಿಧು ಪ್ರಿಯಾಂಕಾ ಗಾಂಧಿ ವಾಡ್ರಾ ಅವರನ್ನು ರಾಷ್ಟ್ರ ರಾಜಧಾನಿಯಲ್ಲಿ ಭೇಟಿಯಾದ ಕೆಲವೇ ದಿನಗಳ ನಂತರ ಅಮರಿಂದರ್ ಸಿಂಗ್ ಭೇಟಿ ನಡೆಯಲಿದೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊರಹೊಮ್ಮಿರುವ ಪಂಜಾಬ್ ಬಿಕ್ಕಟ್ಟನ್ನು ನಿಗ್ರಹಿಸಲು ಕಾಂಗ್ರೆಸ್ ಕೇಂದ್ರ ನಾಯಕತ್ವ ಪ್ರಯತ್ನಿಸುತ್ತಿದೆ.
ಇದಕ್ಕೂ ಮೊದಲು, ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕರ್ಜುನ್ ಖರ್ಗೆ ನೇತೃತ್ವದ ಸಮಿತಿಯೊಂದನ್ನು ರಚಿಸಿತು, ಇದು ಅಮರಿಂದರ್ ಮತ್ತು ಸಿಧು ಇಬ್ಬರೊಂದಿಗೂ ಸಭೆ ನಡೆಸಿತ್ತು.