ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಕರ್ನಾಟಕ ಸಿಂಗಂ ಖ್ಯಾತಿಯ ಮಾಜಿ IPS ಅಧಿಕಾರಿ ಅಣ್ಣಾಮಲೈ ನೇಮಕ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆ ಮೇರೆಗೆ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
2024 ರ ಲೋಕಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಬಿಜೆಪಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್ ಮುರುಗನ್ರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಮಾಡಿದೆ. ತೆರವಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಕೆ. ಅಣ್ಣಾಮಲೈ ನೀಡಲಾಗಿದೆ. ಚುನಾವಣೆ ಸೋಲಿನ ಬಳಿಕವೂ ಒಳ್ಳೆಯ ರಾಜಕೀಯ ನಾಯಕನನ್ನಾಗಿ ಮಾಡುವ ಉದ್ದೇಶದಿಂದ ಬಿಜೆಪಿ ಒಳ್ಳೆಯ ಅವಕಾಶವನ್ನು ನೀಡಿದೆ ಎಂದು ಎನ್ನಲಾಗುತ್ತಿದೆ. ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷವನ್ನು ಮುನ್ನಡೆಸುವ ಉತ್ಸಾಹಿ ಯುವ ರಾಜಕಾರಣಿಯಾಗಬಲ್ಲರು ಅನ್ನುತ್ತಿದೆ ತಮಿಳುನಾಡು ಬಿಜೆಪಿ ವಲಯ.