ಇಬ್ಬರು ಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ-ಮಕ್ಕಳು ಆತ್ಮಹತ್ಯೆ! | ಜನತಾ ನ್ಯೂಸ್
ಮಂಡ್ಯ : ತಾಯಿ ಮತ್ತು ಇಬ್ಬರು ಮಕ್ಕಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ತಾಲೂಕಿನ ಹುಳ್ಳೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಮಾಳೆ ಗ್ರಾಮದ ಗಿರೀಶ್ ಎಂಬವರ ಪತ್ನಿ ಸಿಂಚನ (28) ಮಕ್ಕಳಾದ ಮಹೇಂದ್ರ (6), ದಿಂಪನ (3) ಆತ್ಮಹತ್ಯೆ ಮಾಡಿಕೊಂಡವರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಿಂಚನಾ ತನ್ನ ಮಕ್ಕಳನ್ನು ಕರೆದುಕೊಂಡು ನಾಗಮಂಗಲದ ಹುಳ್ಳೇನಹಳ್ಳಿಯಲ್ಲಿರುವ ಅಜ್ಜಿ ಮನೆ ಬಂದಿದ್ದರು. ಬುಧವಾರ ಮಧ್ಯಾಹ್ನ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹಗಳು ನೀರಿನಲ್ಲಿ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಮೃತದೇಹಗಳನ್ನು ನೀರಿನಿಂದ ಹೊರತೆಗೆದರು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನಾ ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.