Sat,Apr20,2024
ಕನ್ನಡ / English

ಸ್ಮಾರಕ ಸಂಬಂಧ ಭೇಟಿ ಮಾಡಿದಾಗ ಮುಖಕ್ಕೆ ಪೇಪರ್ ಎಸೆದಿದ್ದನ್ನು ನೆನಪಿಸಿಕೊಳ್ಳಲಿ: ಸುಮಲತಾ | ಜನತಾ ನ್ಯೂಸ್

09 Jul 2021
1790

ಬೆಂಗಳೂರು : ಬೆಂಗಳೂರಿನಲ್ಲಿ ಸಂಸದೆ ಸುಮಲತಾ ಅಂಬರೀಶ್ ದಿಢೀರ್ ಸುದ್ದಿಗೋಷ್ಠಿ ನಡೆಸಿ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆಯಿಲ್ಲ. ಅಂಬರೀಶ್ ಕಾಲದಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ತರಲಿ. ಇಷ್ಟು ವರ್ಷ ಯಾಕೆ ಸುಮ್ಮನಿದ್ದರು? ಎಂದು ಕಿಡಿಕಾರಿರುವ ಸುಮಲತಾ, ಅಂಬರೀಶ್ ಹೆಸರು ದುರ್ಬಳಕೆ ಬಗ್ಗೆ ಬೇಸರ ವ್ಯಕ್ತಪಡಿಸಿ, ಭಾವುಕರಾಗಿ ಮಾತನಾಡಿದ್ದಾರೆ.

ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಇಂದು ಹೆಸರು ಬಳಸಿ ರಾಜಕೀಯ ಮಾಡುತ್ತಿದ್ದಾರೆ. ಅಂಬರೀಶ್ ಕಾಲದಲ್ಲೇ ಅಕ್ರಮ ನಡೆದಿತ್ತು ಎಂದು ಆರೋಪ ಮಾಡುತ್ತಿದ್ದಾರೆ.. ಅಂಬರೀಶ್ ಕಾಲದಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ಸಮೇತ ದೂರು ನೀಡಲಿ, ಇಷ್ಟು ದಿನ ಸುಮ್ಮನೆ ಇದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಅಂಬರೀಶ್ ಸ್ಮಾರಕ ವಿಚಾರವಾಗಿ ದೊಡ್ಡಣ್ಣ, ಶಿವರಾಮಣ್ಣ ಹೋಗಿದ್ದಾಗ ಇವರು ಮಾತನಾಡಿದ್ದು ಸ್ವಲ್ಪ ನೆನಪು ಮಾಡಿಕೊಳ್ಳಲಿ, ಹಾಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಸಹಿ ಹಾಕಿದ್ದು ನನಗೆ ನೆನಪಿದೆ. ಸ್ಮಾರಕ ನಿರ್ಮಾಣ ಅಭಿಮಾನಗಳ ಬೇಡಿಕೆ ಅದಕ್ಕೆ ಅಂದಿನ ಸರ್ಕಾರ ಸ್ಪಂದಿಸಿದ ರೀತಿ ಜನರಿಗೆ ಗೊತ್ತಿದೆ ಎಂದರು.

ಅಂಬರೀಶ್ ಸ್ಮಾರಕವನ್ನು ಕುಮಾರಸ್ವಾಮಿ ಮಾಡಿಸಿದ್ದಲ್ಲ. ಹಾಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಹಿ ಮಾಡಿ ಒಪ್ಪಿಗೆ ನೀಡಿದ್ದಾರೆ. ಸ್ಮಾರಕ ಸಂಬಂಧ ಹೆಚ್‌.ಡಿ.ಕುಮಾರಸ್ವಾಮಿ ಭೇಟಿಗೆ ಹೋಗಿದ್ದಾಗ ಅವರು ಯಾವ ರೀತಿ ವರ್ತಿಸಿದ್ದಾರೆಂದು ನೆನಪಿಸಿಕೊಳ್ಳಲಿ. ಆಗ ಏಕವಚನದಲ್ಲಿ ಮಾತನಾಡಿ ಪೇಪರ್ ಮುಖಕ್ಕೆ ಎಸೆದಿದ್ದರು. ಅವರದ್ದು ಸಾಧನೆ ಏನು ಎಂದು ಮಾತನಾಡಿದ್ದರು. ಈ ಘಟನೆಯಿಂದ ಬೇಸರವಾಗಿ ನಟ ದೊಡ್ಡಣ್ಣ ಕೂಡಾ ಕಣ್ಣೀರು ಹಾಕಿದ್ದಾರೆ. ಇಷ್ಟಕ್ಕೂ ಯಾರೇ ಸಿಎಂ ಆಗಿದ್ದರೂ ಅಂಬರೀಶ್ ಸ್ಮಾರಕ ಮಾಡ್ತಿದ್ದರು. ಅದು ಅವರ ಕರ್ತವ್ಯ ಎಂದು ಸುಮಲತಾ ಉತ್ತರಿಸಿದ್ದಾರೆ.

ಅಂಬರೀಶ್​ ಸ್ಮಾರಕಕ್ಕೂ ಮೊದಲೇ ವಿಷ್ಣುವರ್ಧನ್ ಸ್ಮಾರಕ ಸಿದ್ಧವಾಗುತ್ತದೆ. ಅವರ ಸ್ಮಾರಕದ ಕೆಲಸವೂ ಆರಂಭವಾಗಿದೆ. ಆದರೆ, ಜಾಗದ ಸಮಸ್ಯೆಯಿಂದ ಸ್ವಲ್ಪ ಗೊಂದಲವಾಗಿತ್ತು ಅಷ್ಟೆ ಎಂದಿರುವ ಸುಮಲತಾ, ಯಾವುದೇ ಹಿರಿಯ ವ್ಯಕ್ತಿತ್ವಗಳ ಬಗ್ಗೆ ಮಾತನಾಡುವುದಕ್ಕೂ ಮುನ್ನ ಆ ಯೋಗ್ಯತೆ ಅವರಿಗಿದೆಯಾ ಎಂದು ಯೋಚಿಸಲಿ ಎಂದು ಜೆಡಿಎಸ್​ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಡಾ.ರಾಜ್​ಕುಮಾರ್​ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಏನಾಯಿತು? ಆಗ ಮುಖ್ಯಮಂತ್ರಿ ಯಾರಿದ್ದರು? ಈಗ ಇದೆಲ್ಲಾ ಮಾತನಾಡುವುದಕ್ಕೆ ಅವರಿಗೆ ನೈತಿಕತೆ ಇದೆಯಾ ಎಂದು ಸಿಟ್ಟಾಗಿದ್ದಾರೆ.

ಕುಮಾರಸ್ವಾಮಿ ಟೆಲಿಪೋನ್ ಟ್ಯಾಪಿಂಗ್ ಮಾಡಿಲ್ಲ ಎಂದಿದ್ದಾರೆ. ಕಳ್ಳ ತಾನು‌ ಕಳ್ಳತನ ಮಾಡಿದ್ದಾನೆ ಎಂದು ಒಪ್ಪಿಕೊಳ್ಳಲ್ಲ.. ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಬಗ್ಗೆ ‌ಮಾತನಾಡಲು ಸಂಸ್ಕಾರ ಇರಬೇಕು. ಡಾ.ರಾಜ್ ನಿಧನರಾಗಿದ್ದಾಗ ಯಾರು‌ ಮುಖ್ಯಮಂತ್ರಿಯಾಗಿದ್ದರು? ಕೀಳುಮಟ್ಟದ ರಾಜಕೀಯಕ್ಕೆ ಅಂಬರೀಶ್ ಹೆಸರು ಬಳಸಿಕೊಳ್ಳಬಾರದು ಎಂದರು.

ಡೀಲಿಂಗ್ ಮಾಡೋದಕ್ಕೆ ಯಾರನ್ನು ನಾನು ಎಡ ಬಲ ಇಟ್ಟುಕೊಂಡಿಲ್ಲ, ಪಿಎಂಜಿಎಸ್ ವೈ ಅನುಷ್ಠಾನಗೊಳಿಸುವುದು ಸಂಸದರ ಕೆಲಸ, ಈ ಬಗ್ಗೆ ಪ್ರಶ್ನಿಸಿದರೆ ಭ್ರಷ್ಟಾಚಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಉಲ್ಟಾ ಛೋರ್ ಕೊತ್ವಾಲ್ ಗೋ ಡಾಟೆ, ಕಳ್ಳನಾದವನು ಪೊಲೀಸರ ವಿರುದ್ಧವೇ ದೂರು ನೀಡುತ್ತಾನೆ ಎಂಬ ಮಾತಿದೆ. ನಾನು ಅಕ್ರಮ ಗಣಿಗಾರಿಕೆ, ಕೆಆರ್ ಎಸ್ ಅಣೆಕಟ್ಟಿಗೆ ಅಪಾಯ ಇರುವ ಬಗ್ಗೆ ಕಳವಳ ವ್ಯಕ್ತ

ಫೋನ್ ಟ್ಯಾಪಿಂಗ್ ಬಗ್ಗೆ ಸೂಕ್ತ ದಾಖಲೆಯಿದೆ. ಯಾವುದೇ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸುತ್ತೇವೆ ಎಂದು ಪೊಲೀಸರ ಅಧಿಕಾರಗಳು ನನ್ನ ಬಳಿ ಹೇಳಿದ್ದಾರೆ. ಶ್ರೀಗಳ ಫೋನ್ ಟ್ಯಾಪ್ ಮಾಡಿದ್ದರು ಎಂದು ಸುಮಲತಾ ಹೇಳಿದರು.

2+2=4 ಆಗುತ್ತೆ 2+2 = 5 ಆಗಲ್ಲ, ಸುಳ್ಳು ಹೆಚ್ಚು ದಿನ ನಿಲ್ಲಲ್ಲ, ಜನಕ್ಕೆ ಯಾರು ಏನು ಎಂಬುದು ಗೊತ್ತಾಗುತ್ತದೆ. ಬೇನಾಮಿ ಹೆಸರಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪರ ಬಳಿ ಮಾತನಾಡುವೆ ಎಂದು ಸುಮಲತಾ ಹೇಳಿದರು.

RELATED TOPICS:
English summary :Sumalatha Ambareesh

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...