ಎಚ್ಡಿಕೆ-ಸುಮಲತಾ ಜಟಾಪಟಿ; ಸಿಎಂ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ | ಜನತಾ ನ್ಯೂಸ್
ಕಲಬುರಗಿ : ಮಂಡ್ಯ ಜಿಲ್ಲೆ ರಾಜಕಾರಣ ಮತ್ತು ಅಕ್ರಮ ಗಣಿಗಾರಿಕೆ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರುಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಬಾರಿಗೆ ಕಲಬುರಗಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಚಾಲನೆಗಾಗಿ ಬಂದಿದ್ದು ಪ್ರವಾಹದ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೂ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸೀಚಿಸಲಾಗಿದೆ ಎಂದರು. ಇನ್ನು ಕೊರೋನಾ ಹೆಚ್ಚಾಗಿರುವ ಕಾರಣ ಕಲಬುರಗಿಯಲ್ಲಿ ಸಂಪುಟ ಸಭೆ ನಡೆಸುವ ನುರ್ಧಾರ ಸಧ್ಯಕ್ಕಿಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಹಾದಿ ಬೀದಿಯಲ್ಲಿ ಮತ್ತು ಮಾಧ್ಯಮಗಳ ಮುಂದೆ ಮಾತನಾಡುವುದರಿಂದ, ವಿಷಯ ಪ್ರಸ್ತಾಪ ಮಾಡುವುದರಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ , ಜನಪ್ರತಿನಿಧಿಗಳ ವರ್ತನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಜಿಗುಪ್ಸೆ , ಬೇಸರ, ಅಸಮಾಧಾನ ಮೂಡಲಿದೆ ಇದಕ್ಕೆ ಯಾರೊಬ್ಬರು ಅವಕಾಶ ಕೊಡಬಾರದು ಎಂದರು.
ಸುಮಲತಾ ಹಾಗೂ ಕುಮಾರಸ್ವಾಮಿ ಪರಸ್ಪರ ಕಚ್ಚಾಟ ಮಾಡುವ ಅವಶ್ಯಕತೆಯಿಲ್ಲ. ಎಲ್ಲರೂ ಸಹೋದರರಂತೆ ಬದುಕಲು ಕಲಿಯಬೇಕಿದೆ. ಮಂಡ್ಯ ಜಿಲ್ಲೆ ರಾಜ್ಯದ ಒಂದು ಭಾಗ. ಹಾಗಾಗಿ ಅಲ್ಲಿಯ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಈ ವಿವಾದ ಇಲ್ಲಿಗೆ ನಿಲ್ಲಿಸಬೇಕು. ಎಲ್ಲರೂ ಒಟ್ಟಾಗಿ ರಾಜ್ಯದ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
"ದಿವಂಗತ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಸಮಯ ನನ್ನ ಕರ್ತವ್ಯವನ್ನು ನಾನು ಪೂರೈಸಿದ್ದೇನೆ. ಆ ಕಾರ್ಯ ನನಗೆ ಸಮಾಧಾನ ತಂದಿದೆ" ಎಂದು ಹೇಳಿದ್ದಾರೆ.