ರಾಜ್ಯದ ಶಾಲಾ ಮಕ್ಕಳಿಗೆ ಇನ್ಮುಂದೆ "ಶೈಕ್ಷಣಿಕ ಪ್ರವಾಸ" ಕಡ್ಡಾಯ: ಸಿ.ಪಿ. ಯೋಗೇಶ್ವರ್ | ಜನತಾ ನ್ಯೂಸ್
ಬೆಂಗಳೂರು : ಶಾಲಾ ಮಕ್ಕಳಿಗೆ ಶೈಕ್ಷಣಿಕ ಪ್ರವಾಸ ಕಡ್ಡಾಯಗೊಳಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಉತ್ತರ ಕರ್ನಾಟಕದವರು ದಕ್ಷಿಣ ಕರ್ನಾಟಕದ ಪ್ರವಾಸಿ ತಾಣಗಳನ್ನು ನೋಡಿಲ್ಲ. ದಕ್ಷಿಣ ಕರ್ನಾಟಕದವರು ಉತ್ತರ ಕರ್ನಾಟಕದ ಪ್ರವಾಸಿ ತಾಣಗಳನ್ನು ನೋಡಿಲ್ಲ. ಹೀಗಾರಿ 2-3 ದಿನ ಶೈಕ್ಷಣಿಕ ಪ್ರವಾಸ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರವಾಸಕ್ಕೆ ಬರುವ ಶಾಲಾ ಮಕ್ಕಳಿಗೆ ವಸತಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಇದಕ್ಕಾಗಿ ಎರಡು ಮೂರು ದಿನಗಳ ತಂಗಲು ಎರಡು ಸಾವಿರ ಮಂದಿಗೆ ಪ್ರವಾಸಿತಾಣಗಳಲ್ಲಿ ಲಾಡ್ಜಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
RELATED TOPICS:
English summary :Yogeshwar