ರಾಜ್ಯದ ಐವರು ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ವಿತರಣೆ | ಜನತಾ ನ್ಯೂಸ್
ಬೆಂಗಳೂರು : ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ರಾಜ್ಯದಿಂದ ಆಯ್ಕೆಯಾಗಿರುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಿ ಮತ್ತು ಅವರ ಕುಟುಂಬದವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸನ್ಮಾನಿಸಿದ್ದಾರೆ.
ಈಕ್ವೆಸ್ಟ್ರಿಯನ್ ಕ್ರೀಡಾಪಟು ಪೌವಾದ್ ಮಿರ್ಜಾ, ಹಾಕಿಪಟು ಎಸ್.ವಿ. ಸುನಿಲ್, ಈಜುಪಟು ಶ್ರೀಹರಿ ನಟರಾಜ್, ಟೆನಿಸ್ ಆಟಗಾರ ರೋಹನ್ ಬೋಪಣ್ಣ, ಗಾಲ್ಫ್ ಆಟಗಾರ್ತಿ ಆದಿತಿ ಅಶೋಕ್ಗೆ ಸರ್ಕಾರದಿಂದ ಗೌರವ ಧನ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಹಾಗೂ ಕೆಒಎ ಅಧ್ಯಕ್ಷ ಗೋವಿಂದ ರಾಜ್ ಭಾಗವಹಿಸಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ಗೆ ರಾಜ್ಯದಿಂದ ಆಯ್ಕೆಯಾದ ಕ್ರೀಡಾಪಟುಗಳಿಗೆ ನಗದು ಪ್ರೋತ್ಸಾಹ ನೀಡಲಾಗಿದೆ. ಗೃಹಕಚೇರಿ ಕೃಷ್ಣಾದಲ್ಲಿ ನಗದು ಪ್ರೋತ್ಸಾಹ ಧನ ನೀಡಿ ಸಿಎಂ ಯಡಿಯೂರಪ್ಪ ಗೌರವಿಸಿದ್ದಾರೆ. ಕ್ರೀಡಾಪಟುಗಳು, ಅವರ ಕುಟುಂಬದವರಿಗೆ ಸಿಎಂ ಸನ್ಮಾನ ಮಾಡಿದ್ದಾರೆ.
ಟೋಕಿಯೋ ಒಲಿಂಪಿಕ್ಸ್ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು ಪೌವಾದ್ ಮಿರ್ಜಾ, ಹಾಕಿ ಆಟಗಾರ ಎಸ್.ವಿ. ಸುನೀಲ್, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಈಜುಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಪ್ರೋತ್ಸಾಹಧನ ಸ್ವೀಕರಿಸಿ ಉತ್ತಮ ಸಾಧನೆ ತೋರುವ ವಿಶ್ವಾಸ ವ್ಯಕ್ತಪಡಿಸಿದರು.