ರಾಜ್ಯಾದ್ಯಂತ ಬೆಳ್ಳಂ ಬೆಳಗ್ಗೆ ಎಸಿಬಿ ಶಾಕ್- 40 ಕಡೆ 300 ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ! | ಜನತಾ ನ್ಯೂಸ್
ಬೆಂಗಳೂರು : ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದಾದ್ಯಂತ 9 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಒಂದೇ ಕಾಲದಲ್ಲಿ 9 ಅಧಿಕಾರಿಗಳ ಮನೆಗೆ ದಾಳಿ ನಡೆಸಲು ಯೋಜನೆ ರೂಪಿಸಿರುವ ಎಸಿಬಿ ಅಧಿಕಾರಿಗಳು ಈ ದಾಳಿಗಾಗಿ ಸುಮಾರು 300 ಅಧಿಕಾರಿಗಳನ್ನು ನೇಮಕ ಮಾಡಿದ್ದು, ಏಕ ಕಾಲದಲ್ಲಿ ರಾಜ್ಯದ 40 ಕಡೆ ದಾಳಿ ನಡೆಸಿದ್ದಾರೆ. ಒಂಭತ್ತು ಮಂದಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಲು ಯೋಜನೆ ರೂಪಿಸಲಾಗಿದ್ದು, ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ಈ ಕೆಲಸದಲ್ಲಿ ತೊಡಗಿದ್ದಾರೆ. ಅಲ್ಲದೆ, ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಹತ್ತಾರು ಪ್ರಮುಖ ದಾಖಲೆಗಳನ್ನೂ ಸಹ ವಶಕ್ಕೆ ಪಡೆದಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆದಿದೆ.
1) ಜಿ. ಶ್ರೀಧರ್, ಇಇ ಜಿಲ್ಲಾ ನಗರಾಭಿವೃದ್ಧಿ ಕೋಶ ಡಿಸಿ ಕಚೇರಿ ಮಂಗಳೂರು
2) ಕೃಷ್ಣ .ಎಸ್. ಹೆಬ್ಸರ್, ಇಇ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಲಿಮಿಟೆಡ್, ಉಡುಪಿ
3) ಆರ್ ಪಿ ಕುಲಕರ್ಣಿ, ಸಿಇ ಕೆಆರ್ಡಿಸಿಎಲ್
4) ಎಚ್ ಆರ್ ಕೃಷ್ಣಪ್ಪ, ಸಹಾಯಕ ನಿರ್ದೇಶಕ ಮಲ್ಲೂರು ನಗರ ಯೋಜನಾ ಪ್ರಾಧಿಕಾರ, ಕೋಲಾರ
5) ಸುರೇಶ್ ಮೊಹ್ರೆ, ಜೆಇ ಪಿಆರ್ಇ ಬೀದರ್
6) ವೆಂಕಟೇಶ್ ಟಿ, ಡಿಸಿಎಫ್ ಸಾಮಾಜಿಕ ಅರಣ್ಯ ಮಂಡ್ಯ
7) ಸಿದ್ದರಾಮ ಮಲ್ಲಿಕಾರ್ಜುನ್ ಬಿರಾದಾರ, ಎಇಇ ಹೆಸ್ಕಾಮ್ ವಿಜಯಪುರ
8) ಕೃಷ್ಣಮೂರ್ತಿ, ಹಿರಿಯ ಮೋಟಾರು ವಾಹನ ನಿರೀಕ್ಷಕ, ಕೋರಮಂಗಲ
9) ಎ ಎನ್ ವಿಜಯ್ ಕುಮಾರ್, ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್, ಬಳ್ಳಾರಿ
ಇಂದು ಒಂದೇ ದಿನ ಬೆಂಗಳೂರು, ಮಂಗಳೂರು, ಉಡುಪಿ, ಮಾಲೂರು, ಬೀದರ್, ಮಂಡ್ಯ, ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ 9 ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಲಾಗಿದೆ.