ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಸಪ್ಲೈಯರ್ ಮೇಲೆ ಹಲ್ಲೆ: ಗೃಹ ಸಚಿವರಿಗೆ ಇಂದ್ರಜಿತ್ ಲಂಕೇಶ್ ದೂರು | ಜನತಾ ನ್ಯೂಸ್
ಬೆಂಗಳೂರು : ಇಂದು ಬೆಳಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಟ ದರ್ಶನ್ ಮತ್ತು ಅವರ ಸ್ನೇಹಿತರ ವಿರುದ್ಧ ಗೃಹ ಸಚಿವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ದೂರು ನೀಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಮೈಸೂರು ಜಿಲ್ಲೆಯಲ್ಲಿ ಸೆಲೆಬ್ರಿಟಿಗಳ ನಡವಳಿಕ, ಭಾಷೆ ಮಿತಿಮೀರುತ್ತಿದೆ. ಜನಸಾಮಾನ್ಯರಿಗೆ ನ್ಯಾಯ ಸಿಗುತ್ತಿಲ್ಲ. ಪೊಲೀಸ್ ಠಾಣೆಗಳಲ್ಲಿ ಸೆಟಲ್ ಮೆಂಟ್ ಮೂಲಕ ಡೀಲ್ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಮೈಸೂರಿನ ಸಂದೇಶ್ ನಾಗರಾಜ್ ಹೋಟೆಲ್ ನಲ್ಲಿ ದೊಡ್ಡ ಗಲಾಟೆ ನಡೆದಿದ್ದು, ನಟ ದರ್ಶನ್, ರಾಕೇಶ್, ಪಾಪಣ್ಣ ಸೇರಿ ಹೋಟೆಲ್ ನ ದಲಿತ ಕೆಲಸಗಾರಿನಿಗೆ ಹೊಡೆದಿದ್ದಾರೆ ಎನ್ನುವ ವರದಿ ನನ್ನ ಬಳಿ ಇದೆ. ಅದಕ್ಕೆ ಸಾಕ್ಷ್ಯ ಕೂಡ ಇದೆ. ಇದನ್ನು ಗೃಹ ಸಚಿವರಿಗೆ ತಲುಪಿಸಿದ್ದೇನೆ.
ಹೋಟೆಲ್ ನಲ್ಲಿ ದಲಿತ ಸಪ್ಲೈಯರ್ ಗೆ ಹಲ್ಲೆ ನಡೆಸಿ ಸಿಸಿ ಟಿವಿ ದೃಶ್ಯಾವಳಿ ನಾಶ ಮಾಡಿದ್ದಾರೆ. ಈ ಬಗ್ಗೆ ದೂರು ಠಾಣೆಗೆ ಹೋದರೆ ಪೊಲೀಸರು ರಾಜೀ ಸಂಧಾನ ಮಾಡಿ ಕಳುಹಿಸಿದ್ದಾರೆ. ಅಂದರೆ ಪೊಲೀಸ್ ಠಾಣೆಗಳು ಸಟ್ಲಮೆಂಟ್ ಕೇಂದ್ರಗಳು ಆಗುತ್ತಿವೆ.
ಇದರಿಂದ ಅವನ ಕಣ್ಣು ಮಂಜಾಗಿ ಹೋಗಿದೆ, ನಂತರ ಹೋಗಿ ಪೊಲೀಸ್ ಸ್ಟೇಷನ್ ನಲ್ಲಿ ಸೆಟ್ಲ್ ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ನನ್ನಲ್ಲಿ ಸಾಕ್ಷಿಗಳಿವೆ, ಸಾಕ್ಷಿಗಳನ್ನಿಟ್ಟುಕೊಂಡೇ ಇಂದು ಗೃಹ ಸಚಿವರಿಗೆ ದೂರು ನೀಡಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇನೆ ಎಂದರು.