Thu,Apr18,2024
ಕನ್ನಡ / English

ಆಸಿಡ್​ ದಾಳಿ, ನಾಲ್ವರಿಗೆ ಜೀವಾವಧಿ ಶಿಕ್ಷೆ: ಈ ತೀರ್ಪು ಉಸಿರಾಡುವಂತೆ ಮಾಡಿದೆ: ಸಂತ್ರಸ್ತೆ | ಜನತಾ ನ್ಯೂಸ್

15 Jul 2021
1240

ಶೃಂಗೇರಿ : ಶೃಂಗೇರಿ ಮಹಿಳೆ ಮೇಲೆ ಆಯಸಿಡ್ ದಾಳಿ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ರೂ. ದಂಡ ವಿಧಿಸಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ನ್ಯಾಯಲಯ ತೀರ್ಪು ನೀಡಿದೆ.

ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ಈ ಆದೇಶ ಹೊರಡಿಸಿದ್ದು, ಆರೋಪಿಗಳಾದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37) ಅವರಿಗೆ ಜೀವಾವಧಿ ಶಿಕ್ಷೆ ನೀಡಲಾಗಿದೆ.

ಶಿಕ್ಷೆಗೆ ಒಳಗಾದವರು ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್. ಈ ನಾಲ್ವರು 2015ರ ಏಪ್ರಿಲ್ 18ರಂದು ಮೆಣಸೆಯಲ್ಲಿ ಮಹಿಳೆಯೊಬ್ಬರ ಮೇಲೆ ಆಸಿಡ್​ ದಾಳಿ ನಡೆಸಿದ್ದರು. 6 ವರ್ಷದಿಂದ ಸುದೀರ್ಘ ವಿಚಾರಣೆ ನಡೆದ ಬಳಿಕ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 20 ಲಕ್ಷ ರೂ. ದಂಡ ವಿಧಿಸಿ ಆದೇಶ ನೀಡಿದ್ದಾರೆ.

ತೀರ್ಪು ಪ್ರಕಟಗೊಂಡ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂತ್ರಸ್ತೆ ಸುಮನಾ, ಈ ತೀರ್ಪು ನನಗೆ ಉಸಿರಾಡುವ ಹಾಗೆ ಆಗಿದೆ. ಇಲ್ಲಿಯವರೆಗೆ ನಾನು ಸತ್ತಂಗೆ ಇದ್ದೆ, ಸದ್ಯ ನನಗೆ ತೃಪ್ತಿ ಸಿಕ್ಕಿದೆ ಎಂದಿದ್ದಾರೆ.

ಘಟನೆ -
ಗಣೇಶ್ ಎಂಬಾತ ಮದುವೆಯಾಗುವಂತೆ ವಿಚ್ಚೇದಿತ ಮಹಿಳೆ ಸುಮನಾಳ ಹಿಂದೆ ಬಿದ್ದಿದ್ದ. ಇವರಿಬ್ಬರೂ ಒಂದೇ ಗ್ರಾಮದ ನಿವಾಸಿಗಳಾಗಿದ್ದ ಕಾರಣ ಇವರಿಗೆ ಪರಿಚಯವಿತ್ತು. ಮಹಿಳೆ ಮದುವೆಯಾಗಲು ತಿರಸ್ಕರಿದಕ್ಕೆ ಗಣೇಶ ಆಕೆಗೆ ಬೆದರಿಕೆ ಹಾಕಿದ್ದ. ಗಣೇಶನ ಯಾವ ಬೆದರಿಕೆಗೂ ಮಹಿಳೆ ಬಗ್ಗಲಿಲ್ಲ ಎಂದು ಗಣೇಶ ತನ್ನ ಸ್ನೇಹಿತರ ಜೊತೆ ಸೇರಿ ಆಯಸಿಡ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ.

ಏಪ್ರಿಲ್ 18ರ ರಾತ್ರಿ ಮಹಿಳೆ ಬ್ಯೂಟಿ ಪಾರ್ಲರ್ ಕೆಲಸ ಮುಗಿಸಿ ಮನೆಗೆ ಮರಳುತ್ತಿರುವಾಗ ಹಿಂದಿನಿಂದ ಬೈಕ್ನಲ್ಲಿ ಬಂದ ಆರೋಪಿಗಳು ವಿಳಾಸ ಕೇಳುವ ಸೋಗಿನಲ್ಲಿ ಮಹಿಳೆಯನ್ನು ಮಾತನಾಡಿಸಿ ಆಯಸಿಡ್ ಎರಚಿ ಪರಾರಿಯಾಗಿದ್ದರು. ಆಯಸಿಡ್ ದಾಳಿಯಲ್ಲಿ ಮಹಿಳೆಯ ಬಲಗಣ್ಣು ಪೂರ್ಣ ಸುಟ್ಟಿದ್ದು ಎಡಗಣ್ಣು ಭಾಗಶಃ ಹಾನಿಯಾಗಿದೆ. ಮೈ ಕೈ ಕಾಲು ಸುಟ್ಟಿದೆ. ಈ ಸಂಬಂಧ ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED TOPICS:
English summary :Shangeri

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ

ನ್ಯೂಸ್ MORE NEWS...