ಎಲ್ಲ ಜಿಲ್ಲೆಗಳಲ್ಲೂ ಗೋಶಾಲೆ ಸ್ಥಾಪನೆಗೆ ತೀರ್ಮಾನ: ಸಂಪುಟ ಸಭೆಯಲ್ಲಿ ಒಪ್ಪಿಗೆ, ಬಸವರಾಜ್ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ಗದಗ ಪಶುಸಂಗೋಪನಾ ಕಾಲೇಜ್ ಎರಡನೇ ಹಂತದ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ, ಪ್ರತಿ ಜಿಲ್ಲೆಗೆ ಗೋಶಾಲೆ ತೆರೆಯಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 15 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.
ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ ಮುಗಿದ ನಿರ್ದೇಶಕ ಮಂಡಳಿಗೆ ಮಾತ್ರ ಚುನಾವಣೆ ನಡೆಸಲಾಗುವುದು. ಆದರೆ, ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.
ಕರ್ನಾಟಕ ಗೋವಧೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿವ ಕಾರಣ, ಜಾನುವಾರುಗಳ ಸಂರಕ್ಷಣೆಗೆ ಗೋಶಾಲೆಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ. ಪ್ರತಿಯೊಂದು ಜಿಲ್ಲೆಯಲ್ಲಿ ಗೋಶಾಲೆ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ₹15 ಕೋಟಿ ನೀಡಲಾಗುವುದು. ಕೆಲಸದ ಪ್ರಗತಿ ನೋಡಿಕೊಂಡು ಹೆಚ್ಚುವರಿ ಹಣ ನೀಡಲಾಗುತ್ತದೆ ಎಂದು ಹೇಳಿದರು.
ಈ ಬಾರಿ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆಯಪ್ ಮೂಲಕವೇ ನಡೆಸಲು ತೀರ್ಮಾನಿಸಲಾಗಿದೆ. ರೈತರ ಮೊಬೈಲ್ ಆಯಪ್ ಮೂಲಕ ತಮ್ಮ ಕೃಷಿ ಜಮೀನಿನ ಮಾಹಿತಿ ನೀಡಬೇಕು. ಇದಕ್ಕೆ ಅವರು ಖಾಸಗಿ ವ್ಯಕ್ತಿಗಳ ನೆರವು ಪಡೆಯಬಹುದು. ಇದಕ್ಕಾಗಿ ₹48 ಕೋಟಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ 9 ಆಕ್ಷಿಜನ್ ಘಟಕ ಇದೆ. 815 ಉತ್ಪಾದನಾ ಸಾಮರ್ಥ್ಯ ಇದೆ. 5000 ಮೆಟ್ರಿಕ್ ಟನ್ ಸಂಗ್ರಹ ಸಾಮರ್ಥ್ಯ ಇದೆ. ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕೆ ಖಾಸಗಿ ಬಂಡವಾಳದಾರರು ಬಂದರೆ ಸಬ್ಸಿಡಿ ನೀಡಲಾಗುವುದು. ಕನಿಷ್ಠ 10 ಕೋಟಿ ಬಂಡವಾಳ ಹೂಡಬೇಕು ಎಂದರು.
ದಾಸನಪುರದಲ್ಲಿ ಎಪಿಎಂಸಿ 93 ಮಳಿಗೆಗಳಿವೆ. ಲೀಸ್ ಕಂ ಸೇಲ್ 24ಲಕ್ಷ ದಿಂದ 20 ಲಕ್ಷಕ್ಕೆ ಕಡಿಮೆ ಮಾಡಲಾಗಿದೆ. ಬಾಡಿಗೆ 20 ಸಾವಿರದಿಂದ 15 ಸಾವಿರಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.
ಜೆಒಸಿ ಪಿಯುಸಿ ತತ್ಸಮಾನವಾದ ಶಿಕ್ಷಣ ಎಂದು ಪರಿಗಣಿಸಲಾಗುವುದು. ದೇವದುರ್ಗ ಎಂಜನೀಯರ್ ಕಾಲೇಜ್ ಗೆ 58 ಕೋಟಿ ರೂ. ಹಣ ಬಿಡುಗಡೆಗೆ ನಿರ್ಧರಿಸಲಾಗಿದೆ. ಕೆ.ಎಸ್ ಎಫ್.ಸಿ ಕಟ್ ಬಾಕಿ ಆಗಿರುವವರಿಗೆ ಅನುಕೂಲ ಕಲ್ಪಿಸಲು ಕ್ರಮ ವಹಿಸಲಾಗುವುದು. 15000 ಜನರು ಈಗಾಗಲೇ ಅನುಕೂಲ ಪಡೆದಿದ್ದಾರೆ. ಇನ್ನೂ 2-3.ಸಾವಿರ ಜನರು ಅನುಕೂಲ ಪಡೆಯಲಿದ್ದಾರೆ ಎಂದು ಹೇಳಿದರು.
ಕಾರಾಗೃಹ ಅಭಿವೃದ್ಧಿ ಮಂಡಳಿ ಅಧಿವೇಶನದಲ್ಲಿ ತರಲು ತೀರ್ಮಾನಿಸಲಾಗಿದ್ದು, 139 ಖೈದಿಗಳ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಪ್ರವಾಹ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಅನುಮೋದನೆ ಮಾಡಲಾಗಿದೆ.