Thu,Apr25,2024
ಕನ್ನಡ / English

ತುಟ್ಟಿಭತ್ಯೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆ ಮೇರೆಗೆ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಪ್ರತಿಭಟನೆ | ಜನತಾ ನ್ಯೂಸ್

16 Jul 2021
1573

ಬೆಂಗಳೂರು : 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎಲ್ಲರಿಗೂ ಉಚಿತ ವ್ಯಾಕ್ಸೀನ್, ಎನ್.ಪಿ.ಎಸ್ ರದ್ದುಗೊಳಿಸಿ ನಿಶ್ಚಿತ ಪಿಂಚಣಿ ವ್ಯವಸ್ಥೆ, ಖಾಲಿ ಹುದ್ದೆಗಳ ಭರ್ತಿ ಇತರೆ ಬೇಡಿಕೆಗಳಿಗಾಗಿ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ನಿನ್ನೆ 15.07.2021 ರಂದು ರಾಷ್ಟ್ರ ಮಟ್ಟದ ಪ್ರತಿಭಟನಾ ದಿನಾಚರಣೆ ನಡೆಸಿರುವುದಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು, ಕಲಬುರ್ಗಿ, ರಾಯಚೂರು, ವಿಜಯಪುರ, ಹಗರಿಬೊಮ್ಮನಹಳ್ಳಿ, ಹರಪನಹಳ್ಳಿ, ಚಿಂತಾಮಣಿ, ಮಳವಳ್ಳಿ, ಬಳ್ಳಾರಿ ಹಾಸನದ ಒಕ್ಕೂಟದ ಘಟಕಗಳಿಂದ ಪ್ರತಿಭಟನಾ ದಿನಾಚರಣೆ ನಡೆಸಲಾಗಿದೆ. ಈ ಕುರಿತು ಒಕ್ಕೂಟದ ಕಾರ್ಯಾಧ್ಯಕ್ಷ ಎನ್.ಶೋಭಾಲೋಕನಾಗಣ್ಣ ಜನತಾ.ನ್ಯೂಸ್ ಗೆ ತಿಳಿಸಿದ್ದಾರೆ.

ದೇಶದಾದ್ಯಂತ ಕೋವಿಡ್-19 ರೋಗಾಣು ಹರಡುವಿಕೆಯ ಎರಡನೇ ಅಲೆಯಲ್ಲಿ ಲಕ್ಷಾಂತರ ಜನರು ಸಾವನ್ನಪಿದ್ದಾರೆ. ಕರ್ನಾಟಕದಲ್ಲಿ ಕೂಡ ಹೆಚ್ಚಿನ ಪ್ರಕರಣಗಳು ವರದಿಯಾಗಿದ್ದು, ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಅನೇಕ ಫ್ರಂಟ್ ಲೈನ್ ಕೆಲಸಗಾರರು, ನೌಕರರು ಮತ್ತು ಶಿಕ್ಷಕರು ಈ ಖಾಯಿಲೆಗೆ ತುತ್ತಾಗಿದ್ದಾರೆ.

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ, ಅನೇಕ ವರ್ಷಗಳಿಂದ ಹುದ್ದೆಗಳ ಕಡಿತ, ಹುದ್ದೆಗಳ ರದ್ಧತಿ ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡದೇ ಇರುವುದು, ಇಲಾಖೆಯ ಕೆಲಸ ಕಾರ್ಯಗಳನ್ನು ಖಾಸಗಿಯವರಿಗೆ ವಹಿಸುವುದು, ನಡೆದೇ ಇದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2.80ಲಕ್ಷ ಹುದ್ದೆಗಳು ಖಾಲಿ ಇಡಲಾಗಿದೆ. ಇಂದು ಒಟ್ಟು ಸುಮಾರು 60 ಲಕ್ಷಗಳಷ್ಟು ಸರ್ಕಾರಿ ಹುದ್ದೆಗಳು ದೇಶಾದ್ಯಂತ ಖಾಲಿ ಇವೆ ಎಂದು ಅಂದಾಜಿಸಲಾಗಿದೆ. ಸೇವೆಗಳ ಖಾಸಗೀಕರಣ ಇನ್ನಷ್ಟು ತೀವ್ರಗೊಳಿಸಲು ಈಗ 2ನೇ ಆಡಳಿತ ಸುಧಾರಣಾ ಆಯೋಗವನ್ನು ನಿವೃತ್ತ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾಗಿದೆ.

ಈಗಾಗಲೇ 2006ರ ನಂತರ ನೇಮಕಾತಿ ಹೊಂದಿದ ಖಾಯಂ ನೌಕರರ ಪಿಂಚಣಿ ಖಾಸಗೀಕರಣವಾಗಿದ್ದು, ನಿಶ್ಚಿತ ಪಿಂಚಣಿಯನ್ನು ಕಳೆದುಕೊಂಡಿದ್ದಾರೆ. ಈಗಾಗಲೇ ಕೆಲವು ಓPS ನೌಕರರು ನಿವೃತ್ತರಾಗಿದ್ದು, ಅವರಿಗೆ ರೂ. 600 ರಿಂದ ರೂ.2,000 ದವರೆಗೆ ಪಿಂಚಣಿ ದೊರೆಯುತ್ತಿದೆ. ಇದರಿಂದಾಗಿ ಅನೇಕ ನಿವೃತ್ತ ನೌಕರರು ಹಾಗೂ ಕುಟುಂಬಗಳು ಬೀದಿಗೆ ಬಿದ್ದಿವೆ. ಸರ್ಕಾರವೇ ಮನಸೋ ಇಚ್ಚೆಯಂತೆ ನೌಕರರ ತುಟ್ಟಿ ಭತ್ಯೆಯನ್ನು ದಿನಾಂಕ:01.01.2020 ರಿಂದ 30.06.2021 ರವರೆಗಿನ 18 ತಿಂಗಳ ತುಟ್ಟಿ ಭತ್ಯೆಯನ್ನು ಹಿಡಿದು ಮುಟ್ಟುಗೋಲು ಹಾಕಿಕೊಂಡಿವೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿ ನೌಕರರ ದಕ್ಷತೆಯ ನೆಪದಲ್ಲಿ ನೌಕರರನ್ನು 50 ವರ್ಷಗಳ ವಯಸ್ಸಿನ ನಂತರ ಅವರ ದಕ್ಷತೆಯ ಅನುಗುಣವಾಗಿ, ಅವರಿಗೆ ಕಡ್ಡಾಯ ನಿವೃತ್ತಿ ಮಾಡುವ ಬಗ್ಗೆ ಅಧಿಕೃತ ಜ್ಞಾಪನ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಅಖಿಲ ಭಾರತ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಕರೆಯ ಮೇರೆಗೆ ದಿನಾಂಕ:15.07.2021 ರಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಊಟದ ವಿರಾಮದಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು.

RELATED TOPICS:
English summary :State employee protest urging allowance and other demands

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...