ಯುವತಿ ಚುಡಾಯಿಸಿದನೆಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಸಿಸಿಟಿವಿಯಲ್ಲಿ ಹಲ್ಲೆ ದೃಶ್ಯ ಸೆರೆ! | ಜನತಾ ನ್ಯೂಸ್
ಮೈಸೂರು : ಯುವತಿಯನ್ನು ಚುಡಾಯಿಸಿದನೆಂದು ಯುವಕನ ಮೇಲೆ ಯುವಕರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ರಾಜು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಯುವಕನ ಮೇಲೆ ಹಲ್ಲೆ ನಡೆಸಿದ ಕಿರಣ್, ಪುನೀತ್, ಪ್ರಕಾಶ್ ಹಾಗೂ ನವೀನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಂಚವಳ್ಳಿ ಸರ್ಕಲ್ ಬಳಿ ಇರುವ ಪೆಟ್ರೋಲ್ ಬಂಕ್ ಮುಂದೆ ಯುವತಿ ಮನೆ ಇದೆ. ಇದರ ಮುಂಭಾಗದಲ್ಲೇ ಇರುವ ಕಟ್ಟಡದಲ್ಲಿ ಮೆಣಸಿನಕಾಯಿ ವ್ಯಾಪಾರಕ್ಕೆ ಕಿರಣ್ ಮಳಿಗೆ ಬಾಡಿಗೆ ಪಡೆದುಕೊಂಡಿದ್ದ. ಮೆಣಸಿನಕಾಯಿ ತುಂಬಲು ರಾಜು ಆಗಾಗ್ಗೆ ಮಳಿಗೆಗೆ ಬರುತ್ತಿದ್ದ. ಈ ವೇಳೆ ಕಿರಣ್ ನ ಅತ್ತೆ ಮಗಳ ಮೇಲೆ ರಾಜು ಕಣ್ಣು ಹಾಕಿದ್ದ ಎಂದು ಆರೋಪಿಸಲಾಗಿದೆ.
ಈ ವೇಳೆ ಯುವತಿಯನ್ನು ಪ್ರೇಮದ ಬಲೆಗೆ ಬೀಳಿಸಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಿ ಆತನಿಗೆ ಒಂದೆರಡು ಬಾರಿ ವಾರ್ನಿಂಗ್ ಸಹ ಕೊಟ್ಟಿದ್ದರು. ಈ ಹಿನ್ನಲೆ ನಿನ್ನೆ ಸಂಜೆ ಪೆಟ್ರೋಲ್ ಹಾಕಿಸಲು ಬಂದ ರಾಜು ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಹಾಲಿನ ಕ್ಯಾನ್ನಿಂದ ಹಿಗ್ಗಾಮುಗ್ಗ ಥಳಿಸಿರುವುದನ್ನು ಇದರಲ್ಲಿ ಕಾಣಬುದಾಗಿದೆ.