ದೆಹಲಿ ಪ್ರವಾಸ ಮುಗಿಸಿದ ಕೂಡಲೇ ಸಚಿವ ಸಂಪುಟ ಸಭೆ ಕರೆದ ಸಿಎಂ! | ಜನತಾ ನ್ಯೂಸ್
ಬೆಂಗಳೂರು : ಜುಲೈ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆ ಕರೆಯಲಾಗುತ್ತದೆ. ನಾಯಕತ್ವ ಬದಲಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸಿಎಂ ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ನವದೆಹಲಿಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಸಿಎಂ ಬಿಎಸ್ವೈ ಕಾವೇರಿ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಮುಂದಿನ ಎರಡು ವರ್ಷವೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ದೆಹಲಿಯಲ್ಲಿ ಪರ್ಯಾಯ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಿಎಂ ಬಿಎಸ್ ವೈ ಭೇಟಿಯಾಗಿದ್ದಾರೆ.
ಇದೀಗ ಮುಂದಿನ ಗುರುವಾರ (ಜು.22) ರಂದು ಸಿಎಂ ಯಡಿಯೂರಪ್ಪ ಸಚಿವ ಸಂಪುಟ ಸಭೆ ಕರೆದಿದ್ದಾರೆ. ದೆಹಲಿ ಭೇಟಿಯ ಬಳಿಕ ನಡೆಯಲಿರುವ ಮೊದಲ ಸಚಿವ ಸಂಪುಟ ಸಭೆ ಇದಾಗಲಿದ್ದು, ರಾಜಕೀಯವಾಗಿ ಕುತೂಹಲಕ್ಕೆ ಕಾರಣವಾಗಿದೆ.