ಕುಡಿದ ಮತ್ತಿನಲ್ಲಿ ಸ್ವಂತ ಮಗನಿಗೆ ರಾಡ್ನಿಂದ ಹೊಡೆದ ತಂದೆ | ಜನತಾ ನ್ಯೂಸ್
ದಾವಣಗೆರೆ : ಕುಡಿದ ಅಮಲಿನಲ್ಲಿ ಮಗನಿಗೆ ರಾಡ್ನಿಂದ ತಂದೆ ಥಳಿಸಿದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ. ಹನುಮಂತಪ್ಪ(40) ಹಲ್ಲೆ ಮಾಡಿದ ತಂದೆ.
ನ್ಯಾಮತಿ ಪಟ್ಟಣದ ಶಿವಾನಂದಪ್ಪ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, 10 ವರ್ಷದ ಬಾಲಕ ಶ್ರೇಯಸ್ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮದ್ಯ ವ್ಯಸನಿಯಾಗಿದ್ದ ಹನುಮಂತಪ್ಪ ರಾಡ್ನಿಂದ ಬಲವಾಗಿ ಮಗನ ತಲೆಗೆ ಹೊಡೆದ ಪರಿಣಾಮ ಗಂಭೀರವಾದ ಗಾಯಗಳಾಗಿವೆ. ಬೆಳ್ಳಂಬೆಳಗ್ಗೆ ಕುಡಿದು ಮನೆಗೆ ಬಂದು ಮಗನ ಮೇಲೆ ಹಲ್ಲೆ ನಡೆಸಿದ್ದಾನೆ.
ಗಾಯಗೊಂಡಿದ್ದ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.