ಕಾಂಗ್ರೆಸ್ ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತಂಡ ರಚನೆ: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಳಗಾವಿ : ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೆರೆ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, 2019ರಲ್ಲಿ ಪ್ರವಾಹ ಬಂದಾಗ ಪರಿಹಾರ ಕೊಡಲಿಲ್ಲ. ಆಗ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲೇ ಇಲ್ಲ. ಕಾಂಗ್ರೆಸ್ನಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ತಂಡಗಳನ್ನು ಮಾಡಲಾಗಿದೆ. ಪಕ್ಷದಲ್ಲಿ ಐದಾರು ಟೀಂ ಮಾಡಿದ್ದು ಎಲ್ಲಾ ಜಿಲ್ಲೆಗಳಿಗೆ ತೆರಳಿ, ಏನು ಪರಿಹಾರ ಕೊಡಬೇಕು ಕಷ್ಟ ಕಾಲದಲ್ಲಿ ಸರ್ಕಾರ ಹೇಗೆ ಸ್ಪಂದಿಸಬೇಕು ಅಂತಾ ವರದಿ ಮಾಡುತ್ತಿದ್ದೇವೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಸಾಥ್ ನೀಡಿದರು.