ರಾಜ್ಯ ಸಚಿವ ಸಂಪುಟ : ಪ್ರತಿಜ್ಞಾವಿಧಿ ಸ್ವಿಕರಿಸಿದ 29 ಮಂತ್ರಿಗಳು | ಜನತಾ ನ್ಯೂಸ್
ಬೆಂಗಳೂರು : ಇಂದು ಮಧ್ಯಾಹ್ನ ಕರ್ನಾಟಕದ ಹೊಸ ಸಚಿವ ಸಂಪುಟದಲ್ಲಿ 29 ಸಚಿವರನ್ನು ಸೇರಿಸಿಕೊಳ್ಳಲಾಗಿದೆ. ರಾಜಭವನದಲ್ಲಿ ಮಧ್ಯಾಹ್ನ 2:15 ರ ಸುಮಾರಿಗೆ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ನೂತನ 29 ಮಂತ್ರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಬಾರಿ ಉಪಮುಖ್ಯಮಂತ್ರಿಗಳು ಇರುವುದಿಲ್ಲ, ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೊದಲೇ ಘೋಷಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಿರಿಯ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಿದವರಲ್ಲಿ ಇಲ್ಲ, ಎಂದು ಅವರು ಹೇಳಿದರು.
"ಕ್ಯಾಬಿನೆಟ್ ವಿಸ್ತರಣೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಹೈಕಮಾಂಡ್ ಜೊತೆ ವಿವರವಾದ ಚರ್ಚೆಗಳನ್ನು ನಡೆಸಲಾಯಿತು, ನಿನ್ನೆ ರಾತ್ರಿ ಅಂತಿಮ ಸುತ್ತಿನ ಚರ್ಚೆಯ ನಂತರ, ಇಂದು ಬೆಳಿಗ್ಗೆ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ" ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಪ್ರಮಾಣವಚನ ಸಮಾರಂಭದ ಮೊದಲು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, "ಒಟ್ಟು 29 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಮತ್ತು ಬಿಎಸ್ ಯಡಿಯೂರಪ್ಪ ನೇತೃತ್ವದ ಹಿಂದಿನ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳಿದ್ದರು, ಆದರೆ ಈ ಬಾರಿ ಹೈಕಮಾಂಡ್ ನಿರ್ದೇಶನದ ಅನುಸಾರ, ಉಪಮುಖ್ಯಮಂತ್ರಿ ಸ್ಥಾನ ಯಾರಿಗೂ ಇರುವುದಿಲ್ಲ, ಎಂದು ತಿಳಿಸಿದ್ದಾರೆ.
"ಕ್ಯಾಬಿನೆಟ್ ಅನುಭವ ಮತ್ತು ಹೊಸ ಶಕ್ತಿ ಎರಡರ ಮಿಶ್ರಣವಾಗಿರುತ್ತದೆ" ಎಂದು ಅವರು ಹೇಳಿದ ಅವರು, ಕ್ಯಾಬಿನೆಟ್ನಲ್ಲಿ 7 ಒಬಿಸಿ, 3 ಎಸ್ಸಿ, 1 ಎಸ್ಟಿ, 7 ವೊಕ್ಕಲಿಗ, 8 ಲಿಂಗಾಯತ, 1 ರೆಡ್ಡಿ, ಅವರಲ್ಲಿ ಒಬ್ಬ ಮಹಿಳೆಯೂ ಇದ್ದಾರೆ, ಎಂದಿದ್ದರು.
ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳೆಂದರೆ ವಿ ಸುನೀಲ್ ಕುಮಾರ್ (ಕಾರ್ಕಳ), ಆರಗ ಜ್ಞಾನೇಂದ್ರ (ತೀರ್ಥಹಳ್ಳಿ), ಮುನಿರತ್ನ (ಆರ್ ಆರ್ ನಗರ), ಹಾಲಪ್ಪ ಆಚಾರ್ (ಯಲಬುರ್ಗಾ), ಶಂಕರ್ ಪಾಟೀಲ್ ಮುನೇನಕೊಪ್ಪ (ನವಲಗುಂದ) ಮತ್ತು ಬಿ ಸಿ ನಾಗೇಶ್ (ತಿಪಟೂರು) ಇಂದು ಪ್ರಮಾಣ ವಚನ ಸ್ವಿಕರಿಸಿದ್ದಾರೆ.