ಕಳೆದ 2 ವರ್ಷದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ: ಸುರೇಶ್ ಕುಮಾರ್ | ಜನತಾ ನ್ಯೂಸ್
ಬೆಂಗಳೂರು : ಬಿಎಸ್ವೈ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೆ ಈ ಬಾರಿ ಕೊಕ್ ನೀಡಲಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನೂತನ ಸಂಪುಟ ರಚನೆ ಆಗುತ್ತಿದ್ದಂತೆ ಸುರೇಶ್ ಕುಮಾರ್ ಭಾವುಕ ವಿದಾಯ ಹೇಳಿದ್ದಾರೆ.
ನೂತನ 29 ಸಚಿವರು ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರನ್ನು ಕೈ ಬಿಟ್ಟಿದ್ದು, ಅದರಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಸಹ ಸಚಿವ ಸ್ಥಾನದಿಂದ ಕೈ ಬಿಡಲಾಗಿದೆ.
ಈ ಕುರಿತು ಟ್ವೀಟ್ ಮೂಲಕ "ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು" ಎಂದು ತಿಳಿಸಿದ್ದಾರೆ.
RELATED TOPICS:
English summary :Suresh kumar