ಪ್ರೀತಿಸಿ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ! | ಜನತಾ ನ್ಯೂಸ್
ಹಾಸನ : ಫೋನ್ನಲ್ಲಿ ಪರಿಚಯವಾಗಿದ್ದ ಯುವಕನನ್ನು ಪ್ರೀತಿಸಿ ಕಳೆದ ಐದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಘಟನೆ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮದ ಪೂಜಾ(20) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಪೂಜಾಳಿಗೆ ಈ ಹಿಂದೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿತ್ತು. ಆದರೆ ಫೋನ್ನಲ್ಲಿ ಪರಿಚಯವಾಗಿದ್ದ ಸಕಲೇಶಪುರ ಮೂಲದ ದೀಪಕ್ನ್ನು ಪೂಜಾ ಪ್ರೀತಿಸುತ್ತಿದ್ದಳು. ಇದಾದ 20 ದಿನಕ್ಕೆ ಮನೆಯವರ ವಿರೋಧದ ನಡುವೆಯೂ ಪೂಜಾ, ತನ್ನ ಪ್ರಿಯಕರ ಅಶ್ವಥ್ ಜತೆ ಮದುವೆ ಆಗಿದ್ದಳು.
ದಂಪತಿ ಇಬ್ಬರೂ ಸಕಲೇಶಪುರ ಪಟ್ಟಣದಲ್ಲಿ ವಾಸವಿದ್ದರು. ಇಂದು ಸಕಲೇಶಪುರದಲ್ಲಿ ಹೇಮಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಪೂಜಾ ಪ್ರಾಣ ಬಿಟ್ಟಿದ್ದಾಳೆ.
ಮದುವೆ ನಂತರ ದೀಪಕ್ ಮತ್ತು ಆಕೆಯ ಮನೆಯವರು ನಿತ್ಯವೂ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ನಿತ್ಯವೂ ದೈಹಿಕ ಹಲ್ಲೆ ನಡೆಸಿ ಹಿಂಸೆ ನೀಡುತ್ತಿದ್ದರು. ಹೀಗಾಗಿ ಇಂದು ಪೂಜಾ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೂಜಾ ಪೋಷಕರು, ಆಕೆಯ ಪತಿ ದೀಪಕ್ ವಿರುದ್ಧ ಆರೋಪ ಮಾಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಆಗಮಿಸಿ ಪೂಜಾಳ ಮೃತದೇಹಕ್ಕಾಗಿ ಶೋಧ ನಡೆಸಿದ್ದಾರೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Hasan