ಇಂದಿರಾ ಕ್ಯಾಂಟೀನ್ ಹೆಸರು "ಅನ್ನಪೂರ್ಣೇಶ್ವರಿ ಕ್ಯಾಂಟೀನ್" ಎಂದು ಮರುನಾಮಕರಣ ಮಾಡಿ - ಸಿಟಿ ರವಿ ಒತ್ತಾಯ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹಾತ್ವಾಕಾಂಕ್ಷೆಯ ಯೋಜನೆಯಾಗಿರುವ ಇಂದಿರಾ ಕ್ಯಾಂಟೀನ್ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಕ್ಯಾಂಟೀನ್ ಗೆ ಮರುನಾಮಕರಣ ಮಾಡುವಂತೆ ಮಾಜಿ ಸಚಿವ ಸಿಟಿ ರವಿ ಮುಖ್ಯಮಂತ್ರಿ ಬೊಮ್ಮಾಯಿಗೆ ಮನವಿ ಮಾಡಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವಂತ ಅವರು, ಮುಖ್ಯಮಂತ್ರಿಗಳೇ.. ಕರ್ನಾಟಕದಾಧ್ಯಂತ ಸ್ಥಾಪಿಸಿರುವಂತ ಇಂದಿರಾ ಕ್ಯಾಂಟೀನ್ ಹೆಸರನ್ನು, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂಬುದಾಗಿ ಆದಷ್ಟು ಬೇಗ ಬದಲಾವಣೆ ಮಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ.
"ಕನ್ನಡಿಗರು ತಾವು ಆಹಾರ ಸೇವಿಸುತ್ತಿರುವಾಗ ತುರ್ತುಪರಿಸ್ಥಿತಿಯ ಕರಾಳ ದಿನಗಳನ್ನು ಏಕೆ ನೆನಪಿಸಿಕೊಳ್ಳಬೇಕು?" ಎಂದು ಟ್ವೀಟ್ ಮಾಡಿದ್ದಾರೆ.
RELATED TOPICS:
English summary :CT Ravi