ರಾಜೀನಾಮೆ ನೀಡಿದ ಬಳಿಕವೂ ಕಾವೇರಿ ನಿವಾಸದಲ್ಲೇ ಬಿಎಸ್ವೈ ವಾಸ್ತವ್ಯ: ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ | ಜನತಾ ನ್ಯೂಸ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶದಲ್ಲಿ ತಿಳಿಸಿದೆ
ಹೊಸ ಮುಖ್ಯಮಂತ್ರಿಗಳು ಆಯ್ಕೆಯಾದಾಗ ಹಿಂದೆ ಇದ್ದ ಮುಖ್ಯಮಂತ್ರಿಗಳಿಗೆ ಸಂಪುಟ ದರ್ಜೆ ನೀಡಲಾಗುತ್ತದೆ. ಹಾಗಾಗಿ ಸರ್ಕಾರಿ ನಿವಾಸ, ಎಸ್ಕಾರ್ಟ್, ಪೈಲಟ್ ವಾಹನಗಳ ಸೌಲಭ್ಯಗಳು ಮುಂದಿನ ಒಂದು ಮುಕ್ಕಾಲು ವರ್ಷಗಳ ಕಾಲ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಲಭ್ಯವಾಗಲಿದೆ. ಇದರ ಜೊತೆಗೆ ಬಿಎಸ್ ಯಡಿಯೂರಪ್ಪ ಕಾವೇರಿ ನಿವಾಸದಲ್ಲೇ ವಾಸ್ತವ್ಯವನ್ನು ಮುಂದುವರೆಸಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ಟಿ ನಗರದ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದು, ಅವರು ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗುವುದಿಲ್ಲ. ಈ ಹಿನ್ನಲೆ ಬಿಎಸ್ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲೇ ಬಿಜೆಪಿ ಸರ್ಕಾರದ ಅವಧಿ ಮುಗಿಯುವವರೆಗೂ ಇರಲಿದ್ದಾರೆ.