ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆ ಇಲ್ಲ: ಸಿಎಂ ಬೊಮ್ಮಾಯಿ | ಜನತಾ ನ್ಯೂಸ್
ಬೆಂಗಳೂರು : ಪೊಲೀಸರು ನೀಡುವ ಗೌರವ ವಂದನೆಯನ್ನು ಸಾರ್ವಜನಿಕ ಪ್ರದೇಶದಲ್ಲಿ ನೀಡಬಾರೆಂದು ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಮಂಗಳೂರಿನಲ್ಲಿ ಸೂಚನೆ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಗೆ ತೆರಳುವ ಮುನ್ನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಿಎಂ, ತಮ್ಮ ಆಗಮನದ ಸಮಯದಲ್ಲಿ ಗೌರವ ವಂದನೆ ನೀಡುವ ಅಗತ್ಯವಿಲ್ಲ ಎಂದು ಹೇಳಿದರು.
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆ ಜನರಿಗೆ ತೊಂದರೆ ಉಂಟುಮಾಡುತ್ತದೆ ಎಂದರು.
ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಿದು ತಕ್ಷಣ ಮಂಗಳೂರು ಪೊಲೀಸ್ ಕಮೀಷನರ್ ಎನ್, ಶಶಿಕುಮಾರ್ಗೆ ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಗಾರ್ಡ್ ಆಫ್ ಹಾನರ್ ವ್ಯವಸ್ಥೆ ಮಾಡಬಾರದು ಅಂತಾ ಸೂಚನೆ ನೀಡಿದರು.
ಸಾರ್ವಜನಿಕರಿಗೆ ತೊಂದರೆಯಾಗುವಂತೆ ಗಾರ್ಡ್ ಆಫ್ ಹಾನರ್ ಕೊಡಬೇಡಿ. ಇನ್ನು ಸರ್ಕಾರಿ ಕಚೇರಿ ಹೊರತುಪಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಗಾರ್ಡ್ ಆಫ್ ಹಾನರ್ ಮಾಡುವುದು ಬೇಡ. ವಿಮಾನ ನಿಲ್ದಾಣ, ರೈಲ್ವೇ ಸ್ಟೇಷನ್ ಮತ್ತು ಬಸ್ ಸ್ಟ್ಯಾಂಡ್ಗಳಲ್ಲಿ ಗಾರ್ಡ್ ಆಫ್ ಹಾನರ್ ವ್ಯವಸ್ಥೆ ಮಾಡಿದರೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಇನ್ಮುಂದೆ ಸಾರ್ವಜನಿಕ ಸ್ಥಳದಲ್ಲಿ ಗೌರವ ವಂದನೆಗೆ ವ್ಯವಸ್ಥೆ ಮಾಡಬಾರದು ಅಂತಾ ಈ ಕೂಡಲೇ ನೋಟಿಫಿಕೇಷನ್ ಹೊರಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.