ಆಟೋ ರಿಕ್ಷಾ, ಟ್ರಕ್, ಬಸ್ ಚಾಲಕರು, ಸಿಬ್ಬಂದಿಗೆ ನೆರವಾಗುವ ಹೊಸ ಬಿಲ್ ಜಾರಿ: ಶಿವರಾಂ ಹೆಬ್ಬಾರ್ | ಜನತಾ ನ್ಯೂಸ್
ಬೆಂಗಳೂರು : ಕಾರ್ಮಿಕ ಇಲಾಖೆಯಲ್ಲಿ ದೊಡ್ಡ ಮಟ್ಟದ ಬದಲಾವಣೆ ಮಾಡಲು ಸಿದ್ದರಾಗಬೇಕೆಂದು ನಿರ್ಧಾರ ಮಾಡಿರುವ ಸಚಿವ ಶಿವರಾಮ್ ಹೆಬ್ಬಾರ್, ಅತೀ ಶೀಘ್ರದಲ್ಲೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ ಎಂದಿದ್ದಾರೆ.
ಕಾರ್ಮಿಕ ಇಲಾಖೆಯಲ್ಲಿ ದೃಢ ಹೆಜ್ಜೆ ಇಡಲು ನಿರ್ಧರಿಸಿದ್ದೇವೆ. ಅತಿ ಶೀಘ್ರದಲ್ಲಿಯೇ ಹೊಸ ಬಿಲ್ ಮಂಡನೆ ಮಾಡಲಿದ್ದೇವೆ. ಅದು ಆಟೋ ರಿಕ್ಷಾ, ಟ್ರಕ್, ಬಸ್ ಸೇರಿದಂತೆ ಎಲ್ಲಾ ಚಾಲಕರು ಹಾಗೂ ತಾಂತ್ರಿಕ ಸಿಬ್ಬಂದಿಗೆ ಸಹಾಯ ಆಗಲಿದ್ದು ಆಕಸ್ಮಿಕವಾಗಿ ಮೃತಪಟ್ಟರೆ 5 ಲಕ್ಷ ರೂಪಾಯಿ ಪರಿಹಾರವೂ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮುಂದಿನ ಅಧಿವೇಶನದಲ್ಲಿ ಹೊಸ ಬಿಲ್ ಜಾರಿಗೊಳಿಸುತ್ತೇವೆ ಎಂದು ವಿಕಾಸಸೌಧದಲ್ಲಿ ಹೇಳಿಕೆ ನೀಡಿರುವ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಇದೊಂದು ಮಹತ್ತರ ಬದಲಾವಣೆ ಆಗಲಿದೆ ಎಂದು ಬಣ್ಣಿಸಿದ್ದಾರೆ.
ಒಂದು ಕಾಲಕ್ಕೆ ನಾನು ಚಾಲಕನಾಗಿ ಕೆಲಸಮಾಡಿದ್ದೆ. ನನಗೆ ಚಾಲಕನ ಸಂಕಷ್ಟ ಗೊತ್ತಿದೆ. ಅದಕ್ಕಾಗಿ ಹೊಸ ಬಿಲ್ ತರಲಾಗುತ್ತಿದೆ. ಕಾರ್ಮಿಕ ಇಲಾಖೆಗೆ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯಧನವನ್ನು ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಮುಂದಿನ ಅಧಿವೇಶನದಲ್ಲಿ ಇದು ಈಡೇರಲಿದೆ ಎಂದು ಭರವಸೆ ನೀಡಿದ್ದಾರೆ.
ಕಾರ್ಮಿಕ ಇಲಾಖೆಯ ಸಂಬಂಧಪಟ್ಟಂತೆ ನೀಡುತ್ತಿರುವ ವಿವಿಧ ಸಹಾಯ ಧನ ದುಪ್ಪಟ್ಟು ಮಾಡಲು ತಿರ್ಮಾನ ಮಾಡಲಾಗಿದೆ. ಕಾರ್ಮಿಕ ಇಲಾಖೆ ಸಂಬಂಧಪಟ್ಟಂತೆ ವಿಜಲೆನ್ಸ್ ಸೆಲ್ ಮಾಡಲಾಗುತ್ತದೆ. ವಲಸೆ ಕಾರ್ಮಿಕರಿಗೆ ಪ್ರಮುಖ ಜಿಲ್ಲೆಯಲ್ಲಿ ವಸತಿ ಸಮುಚ್ಚಯ ಕಟ್ಟಲು ತೀರ್ಮಾನ ಮಾಡಲಾಗಿದೆ. ಅಸಂಘಟಿತ ವಲಯಕ್ಕೆ ಮಾಧ್ಯಮ ಸೇರಿದಂತೆ ಹಲವು ವರ್ಗಗಳನ್ನು ಸೇರಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದು ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.