ಇಂದು ರಾಜ್ಯದಲ್ಲಿ 1065 ಪ್ರಕರಣ ದಾಖಲಾಗಿದ್ದು, 28 ಜನರು ಕೋವಿಡ್ಗೆ ಬಲಿ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಇಳಿಮುಖವಾಗಿದ್ದು, ಇಂದು 1,065 ಹೊಸ ಪ್ರಕರಣಗಳು ವರದಿಯಾಗಿವೆ. 1,486 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 0.93 ರಷ್ಟಿದ್ದರೆ, ಸಾವಿನ ಪ್ರಮಾಣ 2.62 ರಷ್ಟಿದೆ. ಬೆಂಗಳೂರಿನಲ್ಲಿ ಇಂದು 270 ಹೊಸ ಪ್ರಕರಣಗಳು ದಾಖಲಾಗಿದ್ದರೆ, 4 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಸೋಂಕು ಪ್ರಕರಣ ಕಂಡು ಬಂದಿದ್ದು, ಇಂದು 284 ಜನರು ಸೋಂಕಿಗೆ ತುತ್ತಾಗಿದ್ದಾರೆ. ಉಡುಪಿಯಲ್ಲಿ 107 ಪ್ರಕರಣ ಕಂಡು ಬಂದಿದ್ದರೆ, ಹಾಸನದಲ್ಲಿ 54 ಪ್ರಕರಣ ದಾಖಲಾಗಿದೆ.
ಸದ್ಯ 22,048 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕೊರೊನಾಗೆ 28 ಜನ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 37,007ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 29,30,529 ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ.
ಗದಗ, ರಾಯಚೂರು, ಕೊಪ್ಪಳದಲ್ಲಿಂದು ಯಾವುದೇ ಕೊರೊನಾ ಪ್ರಕರಣಗಳಯ ದಾಖಲಾಗಿಲ್ಲ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 10, ಬೆಂಗಳೂರು ನಗರ 270, ಬೀದರ್ 2, ಚಾಮರಾಜನಗರ 11, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 22, ಚಿತ್ರದುರ್ಗ 11, ದಕ್ಷಿಣ ಕನ್ನಡ 384, ದಾವಣಗೆರೆ 5, ಧಾರವಾಡ 7, ಗದಗ 0, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 34, ಕೋಲಾರ 21, ಕೊಪ್ಪಳ 0, ಮಂಡ್ಯ 18, ಮೈಸೂರು 63, ರಾಯಚೂರು 0, ರಾಮನಗರ 4, ಶಿವಮೊಗ್ಗ 45, ತುಮಕೂರು 31, ಉಡುಪಿ 107, ಉತ್ತರ ಕನ್ನಡ 38, ವಿಜಯಪುರ 2 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.