ಶಾಲೆಗಳಲ್ಲಿ ಕೊರೊನಾ ಸೋಂಕು ಹರಡದಂತೆ ಕ್ರಮ: ಸಚಿವ ಆರ್. ಅಶೋಕ್ | ಜನತಾ ನ್ಯೂಸ್
ಬೆಂಗಳೂರು : ಕೋವಿಡ್ ವೈರಸ್ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.
ಆಗಸ್ಟ್ 23 ರಿಂದ 9-12ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯಲು ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ತರಗತಿಗಳಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬೇಕೆಂದು ನಿರ್ಧಾರವಾಗಿದೆ.
ಬೆಂಗಳೂರಿನಲ್ಲಿ ಕಾರ್ಪೊರೇಷನ್, ಸರ್ಕಾರಿ ಶಾಲೆ ತೆರೆಯಬೇಕು. ಆದರೆ ತರಗತಿಯಲ್ಲಿ ಹೆಚ್ಚು ಮಕ್ಕಳಿರಬಾರದು ಎಂಬ ಆದೇಶ ಹೊರಡಿಸಲಾಗಿದೆ. ಸದ್ಯಕ್ಕೆ 9-12ನೇ ತರಗತಿಗಳನ್ನು ಆರಂಭಿಸಿ ಪ್ರಾಯೋಗಿಕವಾಗಿ ನೋಡಿಕೊಂಡು, ನಂತರ ಹಂತ ಹಂತವಾಗಿ 7 ಮತ್ತು 8 ನೇ ತರಗತಿಗಳನ್ನು ಕೂಡ ತೆರೆಯಲಾಗುವುದು ಎಂದರು.
RELATED TOPICS:
English summary :R Ashok