ಮಹಾರಾಷ್ಟ್ರ ಸಿಎಂ ಠಾಕ್ರೆ ವಿರುದ್ಧ ಹೇಳಿಕೆ : ಕೇಂದ್ರ ಸಚಿವರ ಬಂಧಿಸಿದ ಮಹಾರಾಷ್ಟ್ರ ಪೋಲಿಸ್ | ಜನತಾ ನ್ಯೂಸ್
ಮುಂಬೈ : ಮಹಾರಾಷ್ಟ್ರ ಪ್ರವಾಸದಲ್ಲಿರುವ ಕೇಂದ್ರ ಸಚಿವ ನಾರಾಯಣ ರಾಣೆಯವರನ್ನು ಮಂಗಳವಾರ ಮಧ್ಯಾಹ್ನ 2.25 ರ ಸುಮಾರಿಗೆ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಪಾಳ ಮೋಕ್ಷ ಮಾಡುವ ಕುರಿತು ಹೇಳಿಕೆ ನೀಡಿದ್ದಕ್ಕೆ ಕೇಂದ್ರ ಸಚಿವರ ಬಂಧನ ಮಾಡಲಾಗಿದೆ.
ಕೇಂದ್ರ ಮಂತ್ರಿ ರಾಣೆಯವರು ಪ್ರಸ್ತುತ ಮುಂಬೈನಿಂದ ಸಿಂಧುದುರ್ಗದವರೆಗೆ ಬಿಜೆಪಿಯ "ಜನ್ ಆಶೀರ್ವಾದ್ ಯಾತ್ರೆ"ಗಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಸೋಮವಾರ ರಾತ್ರಿ ರತ್ನಗಿರಿ ಜಿಲ್ಲೆಯ ಚಿಪ್ಲುನ್ನಲ್ಲಿ ನಡೆದ ರ್ಯಾಲಿಯಲ್ಲಿ ಈ ಹೇಳಿಕೆ ನೀಡಿದ್ದಾರೆ. ಠಾಕ್ರೆ ಅವರು ಆಗಸ್ಟ್ 15ರಂದು ರಾಜ್ಯದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ವಾತಂತ್ರ್ಯದ ವರ್ಷವನ್ನು ಮರೆತಿದ್ದಾರೆ ಮತ್ತು ಭಾಷಣದ ಸಮಯದಲ್ಲಿ ಅವರ ಸಹಾಯಕರೊಂದಿಗೆ ವಿವರಗಳನ್ನು ಪರಿಶೀಲಿಸಬೇಕಾಯಿತು, ಎಂದು ಬಿಜೆಪಿ ನಾಯಕ ಟೀಕಿಸಿದ್ದಾರೆ.
ನಾಸಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ, ಕೇಂದ್ರ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಆವರನ್ನು ತಕ್ಷಣ ಬಂಧಿಸಲು ಆದೇಶಿಸಿದ್ದಾರೆ. ಕರಾವಳಿಯ ರತ್ನಗಿರಿ ಜಿಲ್ಲೆಯಲ್ಲಿ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು, ಆ ಸಂದರ್ಭದಲ್ಲಿ, ಅವರು ಜನ ಆಶೀರ್ವಾದ ಯಾತ್ರೆಯ ಭಾಗವಹಿಸುತ್ತಿದ್ದರು, ಎನ್ನಲಾಗಿದೆ.
ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ", ಎಂದು ತಿಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ರಾಣೆ ಬಂಧನಕ್ಕೆ ಪ್ರತಿಕ್ರಿಯಿಸಿರುವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, "ಕೇಂದ್ರ ಸಚಿವ ನಾರಾಯಣ್ ರಾಣೆ ಜಿಯವರನ್ನು ಮಹಾರಾಷ್ಟ್ರ ಸರ್ಕಾರ ಬಂಧಿಸಿರುವುದು ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ, ಅಂತಹ ಕ್ರಮಗಳಿಂದ ನಾವು ಹೆದರುವುದಿಲ್ಲ ಅಥವಾ ಬಗ್ಗುವುದಿಲ್ಲ. ಜನ-ಆಶೀರ್ವಾದ ಯಾತ್ರೆಯಲ್ಲಿ ಬಿಜೆಪಿ ಪಡೆಯುತ್ತಿರುವ ಅಪಾರ ಬೆಂಬಲದಿಂದ ಈ ಜನರು ಗಲಿಬಿಲಿಗೀಡಾಗಿದ್ದಾರೆ. ನಾವು ಪ್ರಜಾಸತ್ತಾತ್ಮಕವಾಗಿ ಹೋರಾಟ ಮುಂದುವರಿಸುತ್ತೇವೆ, ಪ್ರಯಾಣ ಮುಂದುವರಿಯುತ್ತದೆ", ಎಂದು ಟ್ವೀಟ್ ಮಾಡಿದ್ದಾರೆ.
महाराष्ट्र सरकार द्वारा केंद्रीय मंत्री नारायण राणे जी की गिरफ़्तारी संवैधानिक मूल्यों का हनन है। इस तरह की कार्यवाही से ना तो हम डरेंगे, ना दबेंगे।
— Jagat Prakash Nadda (@JPNadda) August 24, 2021
भाजपा को जन-आशीर्वाद यात्रा में मिल रहे अपार समर्थन से ये लोग परेशान है।
हम लोकतांत्रिक ढंग से लड़ते रहेंगे, यात्रा जारी रहेंगी।