ಡೆತ್ನೋಟ್ ಬರೆದು ಕರ್ತವ್ಯ ನಿರತ ಕಂದಾಯ ನಿರೀಕ್ಷಕ ಆತ್ಮಹತ್ಯೆ! ಕಿರುಕುಳ ಆರೋಪ | ಜನತಾ ನ್ಯೂಸ್
ಚಿಕ್ಕಮಗಳೂರು : ಅಕ್ರಮ ಸಕ್ರಮ ಸಮಿತಿಯವರ ಕಿರುಕುಳಕ್ಕೆ ಬೇಸತ್ತು ಕಂದಾಯ ನಿರೀಕ್ಷಕರೊಬ್ಬರು ಡೆತ್ನೋಟ್ ಬರೆದಿಟ್ಟು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ವರದಿಯಾಗಿದೆ.
ಕ್ಕವಳ್ಳಿ ಬಳಿ ಭದ್ರಾ ಕಾಲುವೆಗೆ ಹಾರಿ ಆರ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವ್ಯಕ್ತಿ ಸೋಮಶೇಖರ್ (52) ಎಂಬವರಾಗಿದ್ದಾರೆ.
ಡೆತ್ನೋಟ್ನಲ್ಲಿ ತರೀಕೆರೆ ಶಾಸಕ ಸುರೇಶ್ ಆಪ್ತರಾಗಿರುವ ಮೂವರ ಹೆಸರು ಉಲ್ಲೇಖಿಸಲಾಗಿದೆ. ಧನಪಾಲ್, ರಮೇಶ್, ಸಂಜೀವ್ ಕುಮಾರ್ ಎಂಬ ಮೂವರ ಹೆಸರು ಉಲ್ಲೇಖಿಸಿ, ಅವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡುತ್ತಿರುವುದಾಗಿ ಬರೆದಿಟ್ಟು ಜೀವ ಕಳೆದುಕೊಂಡಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಮಧ್ಯಾಹ್ನದ ವೇಳೆಯಲ್ಲಿ ಲಕ್ಕವಳ್ಳಿ ಪಟ್ಟಣದ ಸಮೀಪದಲ್ಲಿರುವ ಕದಲಿರಂಗನಾಥ ಸ್ವಾಮಿ ದೇವಾಲಯದ ಬಳಿಯಲ್ಲಿ ಹರಿಯುವ ನಾಲೆಗೆ ಹಾರಿ ಈ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.