ವಾಯುನೆಲೆ ತರಬೇತಿ ಕೇಂದ್ರದಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಏರ್ ಮ್ಯಾನ್ ಆತ್ಮಹತ್ಯೆ! | ಜನತಾ ನ್ಯೂಸ್
ಬೆಳಗಾವಿ : ನಗರದ ಸಾಂಬ್ರಾ ಭಾರತೀಯ ವಾಯುನೆಲೆ ತರಬೇತಿ ಕೇಂದ್ರದಲ್ಲಿ ಸಿಬ್ಬಂದಿಯೋರ್ವರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹರಿಯಾಣಾ ಮೂಲದ ಸಂದೀಪ್ ಕುಮಾರ್ ಎಂಬ ವಾಯುನೆಲೆಯ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಲೆಗೆ ಗುಂಡು ಹಾರಿಸಿಕೊಂಡು ರಕ್ತಸ್ರಾವವಾಗಿ ಕೆಳಗೆ ಬಿದ್ದು ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2016ರಿಂದ ಸಾಂಬ್ರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದೀಪ್ ಕುಮಾರ್ ಕೆಲ ದಿನಗಳಿಂದ ಮಾನಸಿಕವಾಗಿ ಕುಗ್ಗಿದ್ದರು ಎಂದು ತಿಳಿದು ಬಂದಿದೆ.
ಭಾರತೀಯ ವಾಯುನೆಲೆಯಲ್ಲಿ ಕಳೆದ 9 ವರ್ಷಗಳಿಂದ ಸಂದೀಪ್ಕುಮಾರ್ ಸೇವೆ ಸಲ್ಲಿಸುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮಾರಿಹಾಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.