ಮೈಸೂರು ದಸರಾಗೆ ಪ್ರಾಥಮಿಕ ಹಂತದಲ್ಲಿ ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಆನೆಗಳು ಆಯ್ಕೆ | ಜನತಾ ನ್ಯೂಸ್
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2021ದಲ್ಲಿ ಜಂಬೂ ಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಪ್ರಾಥಮಿಕ ಆಯ್ಕೆ ಪ್ರಕ್ರಿಯೆಯಲ್ಲಿ 3 ಆನೆಗಳ ಗುರುತು ಮಾಡಲಾಗಿದೆ.
ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಎಂಬ ಆನೆಗಳು ಗುರುತು ಮಾಡಲಾಗಿದ್ದು, ಅಂತಿಮವಾಗಿ ಆಯ್ಕೆಯಾದಲ್ಲಿ ಮೊದಲ ಹಂತದಲ್ಲಿ ಪಾಲ್ಗೊಳ್ಳಲು ಈ 3 ಆನೆಗಳು ಮೈಸೂರಿಗೆ ಆಗಮಿಸಲಿವೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇಂದು ಈ ಆಯ್ಕೆ ನಡೆದಿದೆ. ಇಲ್ಲಿನ ರಾಂಪುರ ಆನೆ ಶಿಬಿರಕ್ಕೆ ಮೈಸೂರು ಡಿಸಿಎಫ್ ಕಾರಿಕಾಳನ್ ಭೇಟಿ ನೀಡಿ, ಚೈತ್ರಾ, ಲಕ್ಷ್ಮೀ, ಪಾರ್ಥಸಾರಥಿ ಎಂಬ 2 ಹೆಣ್ಣು, 1 ಗಂಡು ಆನೆಗಳನ್ನು ಪ್ರಾಥಮಿಕ ಹಂತದಲ್ಲಿ ಆಯ್ಕೆ ಮಾಡಿದ್ದಾರೆ.
English summary :Mysuru