ಕುಡಿದು ಗಾಡಿ ಓಡಿಸಿ ಅಪಘಾತ, ಪೊಲೀಸರಿಗೆ ಅವಾಜ್ ಹಾಕಿದ ವ್ಯಕ್ತಿ ಅಂದರ್! | ಜನತಾ ನ್ಯೂಸ್
ಹಾಸನ : ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾದ ಘಟನೆ ಮುತ್ತಿಗೆ ಗೇಟ್ ಬಳಿ ನಡೆದಿದೆ.
ವ್ಯಕ್ತಿಯೊಬ್ಬ ಅಪಘಾತಕ್ಕೆ ಕಾರಣನಾಗಿದ್ದಷ್ಟೇ ಅಲ್ಲದೆ, ಪೊಲೀಸರಿಗೂ ಆವಾಜ್ ಹಾಕಿದ ಪ್ರಕರಣ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನಲ್ಲಿ ನಡೆದಿದೆ.
ಅರಕಲಗೂಡು ಮೂಲದ ಬಾಬು ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಆತ ಎದುರಿನಿಂದ ಬರುತ್ತಿದ್ದ ವಾಹನವೊಂದಕ್ಕೆ ಡಿಕ್ಕಿ ಹೊಡೆದ. ಈ ವೇಳೆ ಕಾರು ಚಾಲಕ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯ ತಪ್ಪಿಸಲು ಕಾರನ್ನು ರಸ್ತೆಯಿಂದ ಹಳ್ಳಕ್ಕೆ ಇಳಿಸಿದ. ಹೀಗಾಗಿ, ದೊಡ್ಡ ಅನಾಹುತವೊಂದು ತಪ್ಪಿತು.
ಅಪಘಾತ ನಂತರ ಸ್ಥಳಕ್ಕೆ ಬಂದ ಪೊಲೀಸರ ವಿರುದ್ಧ ಅನವಶ್ಯಕವಾಗಿ ಹರಿಹಾಯ್ದಿರುವ ಚಾಲಕ ಬಾಬು, ಪೊಲೀಸರ ಎದುರು ಕೂಗಾಡುತ್ತಾ ನಾನು ರಕ್ಷಣಾ ವೇದಿಕೆಯ ಕಾರ್ಯಕರ್ತ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾನೆ.
ಪೊಲೀಸರ ಎದುರೇ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿರುವ ಬಾಬು ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅಪಘಾತ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಅರಕಲಗೂಡು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹ ಒಂದು ಪ್ರಕರಣ ಜರುಗಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅಪಘಾತ ಪ್ರಕರಣದ ಅಡಿ ದೂರು ದಾಖಲಿಸಿಕೊಂಡಿದ್ದಾರೆ.