Fri,Apr26,2024
ಕನ್ನಡ / English

ಯಾವುದೇ ಪ್ರತ್ಯೇಕ ಧರ್ಮದ ಬಗ್ಗೆ ನಾನು ಮಾತನಾಡಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ್ | ಜನತಾ ನ್ಯೂಸ್

03 Sep 2021
2526

ಬೆಂಗಳೂರು : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟ ನಿಲ್ಲಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಎಂ.ಪಿ.ಪಾಟೀಲ್ ಇದೀಗ ಉಲ್ಟಾ ಹೊಡೆದಿದ್ದಾರೆ. ಎಲ್ಲ ಉಪ ಪಂಗಡ ಸೇರಿ ಮಾನ್ಯತೆ ಕೇಳಿದ್ದೆವು ಸಿಗಲಿಲ್ಲ. ಈಗ ಪ್ರತ್ಯೇಕ ಧರ್ಮದ ಹೋರಾಟವಿಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದರು.

2023ರ ಚುನಾವಣೆ ಬಳಿಕ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟದ ಬಗ್ಗೆ ಒಟ್ಟಿಗೆ ಕೂತು ಚರ್ಚೆ ಮಾಡಿ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ. ಲಿಂಗಾಯತ ಮತಕ್ಕೆ ಧರ್ಮದ ಮಾನ್ಯತೆ ಸಿಕ್ಕಿದ್ದರೆ ಎಲ್ಲಾ ಒಳ ಪಂಗಡಗಳಿಗೂ ಮೀಸಲಾತಿ ಸಿಗುತ್ತದೆ.

ಹಿಂದೆ ಹೋರಾಟ ಮಾಡಿದ್ದಾಗ ಸಮಯ ಬಹಳ ಕಡಿಮೆ ಇತ್ತು. ಗಡಿಬಿಡಿ ಆಯಿತು, ಲೋಪ ಆಯಿತು. ಈಗ ವೀರಶೈವ ಲಿಂಗಾಯತರೆಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯುತ್ತೇವೆ. ಬಹಳ ಮುಕ್ತ ಮನಸ್ಸಿನಿಂದ ಪ್ರತಿಷ್ಠ ಇಲ್ಲದೇ ಎಲ್ಲರೂ ಒಟ್ಟಿಗೆ ಕೂತು ಮುನ್ನಡೆಯುತ್ತೇವೆ. ವೀರಶೈವ ಲಿಂಗಾಯತ ಬೇರೆ, ಬಸವತತ್ವ ಲಿಂಗಾಯತ ಬೇರೆ ಹೋರಾಟ ಇರುವುದಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಹೋರಾಡುತ್ತೇವೆ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಬಳಿಕ ಪಂಚಪೀಠಗಳು, ವಿರಕ್ತಮಠಗಳು ವೀರಶೈವ ಮಹಾಸಭಾ, ಲಿಂಗಾಯಿತ ಜಾಗತಿಕ ಮಹಾಸಭಾ ಹಾಗೂ ಎಲ್ಲಾ ಪಕ್ಷಗಳ ರಾಜಕೀಯ ಪಕ್ಷಗಳ ಮುಖಂಡರು, ಧುರೀಣರನ್ನು ಸೇರಿಸಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ನಮ್ಮಲ್ಲಿ ಸಾಕಷ್ಟು ತಾತ್ವಿಕ ಭಿನ್ನಾಭಿಪ್ರಾಯಗಳಿವೆ. ಅವು ಏಕಾಏಕಿ ಇತ್ಯರ್ಥವಾಗುವುದಿಲ್ಲ.

ಒಂದರಿಂದ ಮೂರ್ನಾಲ್ಕು ವರ್ಷಗಳ ಕಾಲ ಬೇಕಾಗಬಹುದು. ಈ ಮೊದಲು ವೀರಶೈವ ಲಿಂಗಾಯಿತ ಧರ್ಮಕ್ಕೆ ಮಾನ್ಯತೆ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದಾಗ ಒಂದು ಪದದ ಬಳಕೆಯಿಂದ ತಾಂತ್ರಿಕ ಸಮಸ್ಯೆ ಎದುರಾಗಿ ತಿರಸ್ಕಾರವಾಗಿತ್ತು. ಹಾಗಾಗಿ ನಾವು ಲಿಂಗಾಯಿತ ಧರ್ಮದ ಮಾನ್ಯತೆಗಾಗಿ ಹೋರಾಟ ರೂಪಿಸಿದ್ದೆವು. ಅದರಲ್ಲಿ ಯಾರನ್ನೂ ಏರ್ಪಡಿಸುವ ಉದ್ದೇಶ ಇರಲಿಲ್ಲ. ಮುಂದಿನ ದಿನಗಳಲ್ಲೂ ಕೂಡ ಯಾರನ್ನೂ ಬೇರ್ಪಡಿಸುವ ಉದ್ದೇಶ ಇಲ್ಲ. ನಾವೆಲ್ಲ ಒಟ್ಟಾಗಿ ಮುಂದಡಿ ಇಡುತ್ತೇವೆ ಎಂದರೆ ಯಾರಿಗಾದರೂ ತೊಂದರೆ ಇದೆಯೇ? ಇದರಲ್ಲಿ ಭಿನ್ನಮತದ ಧ್ವನಿ ಏಕೆ ಎಂದು ಪ್ರಶ್ನಿಸಿದರು.

ಮುಂದೆಯೂ ಆಗುವುದಿಲ್ಲ. ನನ್ನ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ಕಾಂಗ್ರೆಸ್‍ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಸಮುದಾಯದ ಹಿತಾಸಕ್ತಿಯಿಂದ ಸ್ವಚ್ಛ , ಮುಕ್ತ ಹಾಗೂ ಶಾಂತಿಯುತ ಮನಸ್ಸಿನಿಂದ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಗತ್ಯಬಿದ್ದರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಸಿದ್ಧ. ಬಾಂಧವ್ಯದ ಬೆಸುಗೆ ಮೂಲಕ ಸಮುದಾಯಕ್ಕೆ ಅನುಕೂಲ ಮಾಡಿಕೊಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಈ ಹಿಂದೆ ತಾವು ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಒಂದು ವೇಳೆ, ವೀರಶೈವ ಪ್ರತ್ಯೇಕ ಧರ್ಮದ ಮಾನ್ಯತೆ ಸಿಕ್ಕಿದರೆ, ಎಲ್ಲರಿಗೂ ಒಳ್ಳೆಯದಾಗುತ್ತಿತ್ತು. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಎಲ್ಲ ವೀರಶೈವ ಪ್ರತ್ಯೇಕ ಧರ್ಮಕ್ಕಾಗಿ ಚರ್ಚೆ ನಡೆಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಎಲ್ಲರೂ ಸಾಮೂಹಿಕವಾಗಿ ಮುನ್ನುಗೋಣ ಎಂದು ತಾವು ಹೇಳಿರುವುದಾಗಿ ತಿಳಿಸಿದ್ದಾರೆ…

RELATED TOPICS:
English summary :M B patil

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...