ನಾವು ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರು, ಗಣಪತಿ ಉತ್ಸವವನ್ನು ನಡೆಸೇ ನಡೆಸುತ್ತೇವೆ! | ಜನತಾ ನ್ಯೂಸ್
ಶಿವಮೊಗ್ಗ : ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ನಡೆಸುತ್ತಿದೆ. ನಾವು ಹಿಂದುತ್ವದ ಹೆಸರಿನಲ್ಲೇ ಅಧಿಕಾರಕ್ಕೆ ಬಂದವರು. ಇದರಲ್ಲಿ ಯಾವುದೇ ಅನುಮಾನವಿಲ್ಲ. ನಾವು ಸದಾ ಹಿಂದುತ್ವದ ಸಿದ್ಧಾಂತವನ್ನು ಒಪ್ಪುತ್ತೇವೆ. ಈ ಬಾರಿಯೂ ಗಣಪತಿ ಉತ್ಸವ ಯಶಸ್ವಿಯಾಗಿ ನಡೆಸಬೇಕು.
ಈ ನಿರ್ಧಾರದಿಂದ ನಾವು ಯಾವ ಕಾರಣಕ್ಕೂ ಹಿಂದೆ ಸರಿಯಲ್ಲ. ಗಣಪತಿ ಉತ್ಸವವನ್ನು ನಡೆಸೇ ನಡೆಸುತ್ತೇವೆ. ಆದರೆ, ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂಬುದನ್ನು ಗಮನಿಸಬೇಕು ಎಂದಿದ್ದಾರೆ.
ಆದರೆ ಕೋವಿಡ್ ಸಂದರ್ಭದಲ್ಲಿ ಹೇಗೆ ನಡೆಸಬೇಕು, ಎಷ್ಟು ಜನ ಸೇರಬೇಕು ಎಂದು ಗಮನಿಸಬೇಕು. ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ನೀತಿ- ನಿಯಮಗಳನ್ನು ತಿಳಿಸಲಿದೆ. ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತದೆ. ಸರ್ಕಾರ ಕೂಡ ಅದಕ್ಕೆ ಪೂರ್ಣ ಬೆಂಬಲ ಕೊಡುತ್ತದೆ ಎಂದು ನನಗೆ ಪೂರ್ಣ ನಂಬಿಕೆಯಿದೆ. ರಾಜ್ಯದ ಜನ ಕೂಡ ಅದನ್ನು ಗಮನಿಸುತ್ತಾರೆ ಎಂದರು.
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಜನ ಸೇರಿದ್ದನ್ನು ನಾನು ಒಪ್ಪುವುದಿಲ್ಲ. ತುಂಬಾ ಸ್ಪಷ್ಟವಾಗಿ ಬಿಜೆಪಿಯ ಒಬ್ಬ ಮಂತ್ರಿಯಾಗಿ ಹೇಳೋಕೆ ಇಷ್ಟ ಪಡುತ್ತೇನೆ ಎಂದು ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.