Fri,Apr26,2024
ಕನ್ನಡ / English

ಸರ್ಕಾರಿ ವಸತಿ ಗೃಹಕ್ಕಾಗಿ ಭಿಕ್ಷೆ ಬೇಡುವುದಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ | ಜನತಾ ನ್ಯೂಸ್

04 Sep 2021
1406

ಬೆಂಗಳೂರು : ಸರ್ಕಾರಿ ವಸತಿ ಗೃಹಕ್ಕಾಗಿ ಭಿಕ್ಷೆ ಬೇಡುವುದಿಲ್ಲ. ಅದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಎಲ್ಲರಿಗೂ ನಿವಾಸ ಇದೆ, ಆದ್ರೆ ನಮ್ಮ ಹಣೆಬರಹ ನೋಡಿ. ಪ್ರೊಟೋಕಾಲ್ ಪ್ರಕಾರ ಸಿಎಂಗಿಂತ ನಾವು ಮೇಲಿನವರು. ಆದ್ರೂ ಸರ್ಕಾರ ನಮಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿಲ್ಲ. ಇಂದು ಕೂಡ ಮತ್ತೆ ಪತ್ರ ಬರೆದಿದ್ದೇನೆ, ನಿವಾಸ ನೀಡಿಲ್ಲ. ನಮಗೆ ಶಕ್ತಿ ಇಲ್ಲವೆಂದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಾವೇರಿ ನಿವಾಸ ನಿಗದಿತ ನಿವಾಸ ಅಲ್ಲ. ಆದರೂ ಕಾವೇರಿ ನಿವಾಸದಲ್ಲಿ ಸಿಎಂ ಆದವರು ಇರ್ತಾರೆ. ಏರ್‌ಪೋರ್ಟ್‌ನಲ್ಲಿ ಸಿಎಂ, ಗೃಹಸಚಿವರು ನೇರ ಹೋಗ್ತಾರೆ. ಸಾಂವಿಧಾನಿಕವಾಗಿ ನಾವು ಅವರಿಗಿಂತ ಮೇಲಿನವರು. ಆದರೆ, ನಮಗೆ ಮಾತ್ರ ಎಲ್ಲಾ ತಪಾಸಣೆ ಮಾಡುತ್ತಾರೆ ಎಂದು ಹೊರಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡಲು ನಾನು, ಸ್ಪೀಕರ್‌ ಪತ್ರ ಬರೆದಿದ್ದೇವೆ. ನನಗೆ ಗಾಂಧಿ ಭವನ ರಸ್ತೆಯ ನಿವಾಸವನ್ನು ಕೊಟ್ಟರೆ ಕೊಡಲಿ. ಇಲ್ಲದಿದ್ದರೆ ನನಗೆ ಸರ್ಕಾರಿ ನಿವಾಸ ಬೇಡ ಎಂದು ಹೊರಟ್ಟಿ ಹೇಳಿದ್ದಾರೆ.

ಸಂಸದೀಯ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹುದ್ದೆಗಳ ಪೈಕಿ ವಿಧಾನ ಪರಿಷತ್ ಸಭಾಪತಿ ಹಾಗೂ ವಿಧಾನಸಭೆ ಸಭಾಧ್ಯಕ್ಷರು ಸೇರಿದ್ದು, ಸಭಾಪತಿ ಮತ್ತು ಸಭಾಧ್ಯಕ್ಷರಿಗೆ ನಿರ್ದಿಷ್ಟ ವಸತಿ ಗೃಹ ಗೊತ್ತುಪಡಿಸಬೇಕು ಎಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಂಟಿಯಾಗಿ ಪತ್ರ ಬರೆದಿದ್ದೇವೆ ಎಂದರು. ಹಿಂದಿನ ಸಭಾಪತಿಗಳಿಗೆ ಹಂಚಿಕೆ ಮಾಡಿದ್ದ ವಸತಿ ಗೃಹ ಖಾಯಂ ಆಗಿ ಗೊತ್ತುಪಡಿಸಲು ತಿಳಿಸಲಾಗಿದೆ. 8ನೇ ಬಾರಿಗೆ ಬರೆದಿರುವ ಕೊನೆಯ ಪತ್ರವಿದು ಎಂದು ಹೊರಟ್ಟಿ ಹೇಳಿದರು.

ಸಭಾಪತಿ, ಸಭಾಧ್ಯಕ್ಷರು ಎಲ್ಲಿಗೂ ಹೋಗುವ ಹಾಗಿಲ್ಲ. ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗುವಂತಿಲ್ಲ. ಹಾಗಾಗಿ, ಇಂಥದ್ದೇ ಮನೆ ನೀಡುವಂತೆ ಪತ್ರ ಬರೆದಿದ್ದೇನೆ. ಆ ಮನೆ ಕೊಟ್ಟರೆ ಮಾತ್ರ ಹೋಗುತ್ತೇನೆ ಎಂದು ಖಡಕ್ ಆಗಿ ಹೇಳಿದರು. ಯಾರೂ ಕೂಡ ಸಭಾಪತಿ, ಸಭಾಧ್ಯಕ್ಷ ಆಗಲು ಒಪ್ಪಲ್ಲ. ಆದರೆ, ನಾನು ಖುಷಿಯಿಂದ ಆಗಿದ್ದೇನೆ ಎಂದರು.

RELATED TOPICS:
English summary :Basavaraj Horatti

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...