ಗಡಿ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ಸಭೆ, ಈ ಐದು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸಿಎಂ ಬೊಮ್ಮಾಯಿ ಸೂಚನೆ! | ಜನತಾ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಕೋವಿಡ್ ಕುರಿತಂತೆ ಚರ್ಚೆ ನಡೆಸಿದರು.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಕೋವಿಡ್ 19 ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ, ಕಟ್ಟೆಚ್ಚರ ವಹಿಸುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಚಾಮರಾಜನಗರ, ಹಾಸನಗಳಲ್ಲೂ ಕೋವಿಡ್ ಕಮ್ಮಿಯಾಗಿದೆ. ಉಡುಪಿಯ ಕೆಲವು ಕಡೆ ಕ್ರಮ ತಗೆದುಕೊಳ್ಳಬೇಕಿದೆ. ಎಲ್ಲಾ ಕಡೆ ಟೆಸ್ಟಿಂಗ್, ಲಸಿಕೆ ಹೆಚ್ಚಳ ಮಾಡಲು ಸೂಚಿಸಲಾಗಿದೆ. ಗಡಿ ಭಾಗದಿಂದ 20 ಕಿ.ಮೀ ವ್ಯಾಪ್ತಿಯ ಎಲ್ಲಾ ಕಡೆಯೂ ಲಸಿಕೆ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ಮಂಗಳೂರು, ಉಡುಪಿಯಲ್ಲೂ ಲಸಿಕಾಕರಣ ಹೆಚ್ಚಿಸಲು ತಿಳಿಸಲಾಗಿದೆ. 35 ಸಾವಿರ ಲಸಿಕೆ ಸಂಗ್ರಹ ಇದೆ. ಇವುಗಳ ವಿತರಣೆಗೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಪರೀಕ್ಷೆ ಪ್ರಮಾಣ ಹೆಚ್ಚಿಸುವ ಮೂಲಕ ತಮ್ಮ ಜಿಲ್ಲೆಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಮತ್ತು ನಗರ ಪ್ರದೇಶದಲ್ಲಿ ಪರೀಕ್ಷೆ ಪ್ರಮಾಣ ಹಾಗೂ ಲಸಿಕೆಯ ಪ್ರಮಾಣ ಹೆಚ್ಚಿಸಲು ಸೂಚಿಸಿದ್ದಾರೆ.