ನಾನು ಕೊತ್ವಾಲ್ ರಾಮಚಂದ್ರನ ಶಿಷ್ಯ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವುದು ನಾನಲ್ಲ! | ಜನತಾ ನ್ಯೂಸ್
ಚಿಕ್ಕಮಗಳೂರು : ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ, ಕೊತ್ವಾಲ್ ರಾಮಚಂದ್ರ ಸತ್ತಾಗ ನಾನು ಪ್ರೈಮರಿ ಸ್ಕೂಲಿನಲ್ಲಿದ್ದೆ. ನಾನು ಅವರ ಶಿಷ್ಯ ಅಂತ ಹೆಮ್ಮೆಯಿಂದ ಹೇಳಿಕೊಂಡದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ ಎಂದು ಸಿ.ಟಿ.ರವಿ ಡಿ.ಕೆ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿ.ಟಿ ರವಿ ಟಾಂಗ್ ಕೊಟ್ಟಿದ್ದಾರೆ. ನನ್ನ ಕಾಲದಲ್ಲಿ ಕೊತ್ವಾಲ್ ರಾಮಚಂದ್ರ ಬದುಕೇ ಇರಲಿಲ್ಲ. ಕೊತ್ವಾಲ್ ರಾಮಚಂದ್ರ ತೀರಿಕೊಂಡಾಗ ನಾನು ಪ್ರೈಮರಿ ಸ್ಕೂಲ್ನಲ್ಲಿದ್ದೆ. ಆದರೆ ಹೆಮ್ಮೆಯಿಂದ ನಾನು ಅವರ ಶಿಷ್ಯ ಅಂತ ಹೇಳಿಕೊಂಡಿದ್ದು ನಾನಲ್ಲ. ಆ ದಿನಗಳು ಪುಸ್ತಕದಲ್ಲಿ ಯಾರು, ಯಾರ ಶಿಷ್ಯರು ಅಂತ ಬರೆದಿದ್ದಾರೆ.
ಆ ಪುಸ್ತಕದಲ್ಲಿ ನನ್ನ ಹೆಸರು ಖಂಡಿತವಾಗಿಯೂ ಇಲ್ಲ. ರಾಜಕೀಯ ಮಾಡೋದಕ್ಕೆ ಗೂಂಡಾಗಿರಿ ಮೆರಿಟ್ ಅಂತಾ ನಾನು ಭಾವಿಸಿಲ್ಲ. ನಾನು ಚಳುವಳಿ ಮಾಡಿದ್ದೇನೆ, ಆ ಕಾರಣಕ್ಕೆ ಜೈಲಿಗೆ ಹೋಗಿದ್ದೇನೆ. ಭ್ರಷ್ಟಾಚಾರ, ಗುಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ ಎಂದು ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.
ನನ್ನ ಮೇಲೆ ತುಂಬಾ ಕೇಸುಗಳು ಬಿದ್ದಿವೆ. ಆ ಎಲ್ಲಾ ಕೇಸುಗಳು ಹೋರಾಟ ಮಾಡಿ ಜೈಲಿಗೆ ಹೋಗಿರುವುದು. ಗೂಂಡಾಗಿರಿ ಮಾಡಿ ಯಾವತ್ತೂ ಜೈಲಿಗೆ ಹೋಗಿಲ್ಲ, ಹೋಗುವುದು ಇಲ್ಲ. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿಲ್ಲ, ಹೋಗುವುದಿಲ್ಲ ಎಂದು ಬಿಜೆಪಿ ನಾಯಕ ಸಿ.ಟಿ ರವಿ ತಿಳಿಸಿದ್ದಾರೆ.
ಆ ದಿನಗಳು ಪುಸ್ತಕದಲ್ಲಿ ಯಾರು ಯಾರ ಶಿಷ್ಯರು ಎಂದು ಬರೆದಿದ್ದಾರೆ. ಆ ಪುಸ್ತಕದಲ್ಲಿ ನನ್ನ ಹೆಸರಿಲ್ಲ ಎಂದ ಅವರು, ರಾಜಕೀಯ ಮಾಡೋಕೆ ಗೂಂಡಾಗಿರಿ ಮೆರಿಟ್ ಎಂದು ನಾನಂತೂ ಭಾವಿಸಿಲ್ಲ. ನಾನು ಜೈಲಿಗೆ ಹೋಗಿರುವುದು ನಿಜ, ಆದರೆ ಭಷ್ಟಾಚಾರ, ಗೂಂಡಾಗಿರಿ ಮಾಡಿ ಜೈಲಿಗೆ ಹೋಗಿಲ್ಲ. ಸಮಾಜಕ್ಕಾಗಿ ಚಳವಳಿ ಮಾಡಿ ಜೈಲಿ ಹೋಗಿದ್ದೆ. ನನ್ನ ಮೇಲೆ ಅನೇಕ ಕೇಸ್ಗಳು ಬಿದ್ದಿವೆ, ಆದರೆ ಅವೆಲ್ಲವೂ ಹೋರಾಟದ ಕಾರಣಕ್ಕೆ ಬಿದ್ದ ಕೇಸ್ಗಳೇ ಹೊರತು ಭಷ್ಟಾಚಾರ, ಗೂಂಡಾಗಿರಿ ಕಾರಣಕ್ಕೆ ಬಿದ್ದಿರುವುದಲ್ಲ ಎಂದರು.