ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ನಮ್ಮ ಗುರಿ: ಕೋಟ ಶ್ರೀನಿವಾಸ ಪೂಜಾರಿ | ಜನತಾ ನ್ಯೂಸ್
ಬೆಂಗಳೂರು : ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಅಸ್ಪೃಶ್ಯತೆಗೆ ಕಡಿವಾಣ ಹಾಕುವುದು ಕೂಡ ನನ್ನ ಗುರಿ ಎಂದು ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.
ಇಂದು ಪಕ್ಷದ ಕಚೇರಿಗೆ ಬಂದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಬಿಜೆಪಿ ಅಧ್ಯಕ್ಷರ ಸೂಚನೆಯಂತೆ ಪಕ್ಷದ ಕಚೇರಿಗೆ ಬಂದಿದ್ದೇವೆ, ಅಹವಾಲುಗಳನ್ನು ಸ್ವೀಕಾರ ಮಾಡಿದ್ದೇವೆ ಅಲ್ಲದೆ ಪ್ರತೀ ದಿನ ಕಾರ್ಯಾಲಯಕ್ಕೆ ಬಂದು ಅಹವಾಲು ಸ್ವೀಕಾರಕ್ಕೆ ಸೂಚನೆಯನ್ನೂ ನೀಡಿದ್ದೇವೆ ಎಂದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ 1.20 ಕೋಟಿ ಕುಟುಂಬ ಇದೆ. ಅವರಿಗೆ ಶೌಚಾಲಯ, ಹಕ್ಕು ಪತ್ರ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ. ಇಲಾಖೆಯಲ್ಲಿ ಆಗ್ತಿರೋ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವುದು ನಮ್ಮ ಗುರಿ. ಅಸ್ಪೃಶ್ಯತೆ ಕಡಿವಾಣ ಹಾಕುವುದು ನನ್ನ ಗುರಿ. ಆರ್ಥಿಕ ಕಾರಣದಿಂದ ಕೆಲ ಕಾಲ ಹಣ ಬಿಡುಗಡೆಗೆ ಸಮಸ್ಯೆ ಆಗಿದೆ ಈ ಕುರಿತು ಸಿಎಂ ಸಭೆ ಮಾಡಿ ವಿಶ್ವಾಸ ಮೂಡಿಸಿ, ಒಟ್ಟಿಗೆ ಕೆಲಸ ಮಾಡ್ತಿದ್ದಾರೆ ಎಂದರು.
ಪ್ರತಿ ಹತ್ತು ವರ್ಷಗಳಿಗೆ ಒಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದರು.