Fri,Apr19,2024
ಕನ್ನಡ / English

ಸೆ. 13 ರಿಂದ 24 ಮುಂಗಾರು ಅಧಿವೇಶನ, 10 ದಿನಗಳ ಕಾಲ ವಿಧಾನಸಭೆ ಅಧಿವೇಶನ | ಜನತಾ ನ್ಯೂಸ್

08 Sep 2021
2324

ಬೆಂಗಳೂರು : ಸೆಪ್ಟೆಂಬರ್ 13 ರಿಂದ 24 ರವರೆಗೆ ಹತ್ತು ದಿನಗಳ ಕಾಲ ಕರ್ನಾಟಕದ 15ನೇ ವಿಧಾನಸಭೆಯ 10ನೇ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

15ನೇ ವಿಧಾನಸಭೆಯ 10ನೇ ಅಧಿವೇಶನ ಸೆಪ್ಟೆಂಬರ್ 13 ರಿಂದ 24ರ ವರೆಗೆ ನಡೆಯಲಿದ್ದು, ಕಲಾಪ ನಡೆಯುವ ವೇಳೆ ಸಿಎಂ ಒಳಗೊಂಡಂತೆ ಎಲ್ಲಾ ಸಚಿವರು, ಶಾಸಕರು ಕಡ್ಡಾಯವಾಗಿ ಹಾಜರಿರಬೇಕೆಂದು ಮನವಿ ಮಾಡಿರುವುದಾಗಿ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಅಧಿವೇಶನ ಯಶಸ್ವಿಯಾಗಿ ನಡೆಯಲು ಆಡಳಿತ ಹಾಗೂ ಪ್ರತಿಪಕ್ಷದವರ ಸಹಕಾರ ಕೋರುತ್ತೇನೆ ಎಂದರು.

ಅಧಿವೇಶನದಲ್ಲಿ ಚರ್ಚೆಯಾಗಲು ಇದುವರೆಗೂ 18 ಬಿಲ್‌ಗಳು ಬಂದಿವೆ. ನಾಲ್ಕು ಪೆಂಡಿಂಗ್​ ಇರುವ ಬಿಲ್​ಗಳಿವೆ. ಕಾರ್ಯದರ್ಶಿಗಳಿಗೆ ಪತ್ರ ಬರೆದು ಎಲ್ಲಾ ಸದಸ್ಯರಿಗೂ ಬಿಲ್ ಕಾಪಿ ಕೊಡಲು ಹೇಳಿದ್ದೇನೆ. ಇನ್ನು ಮೇಲೆ ಬರುವ ಬಿಲ್‌ಗಳ ಬಗ್ಗೆ ಏನು ಮಾಡಬೇಕು ಅಂತ ಸಂಬಂಧಿಸಿದವರ ಜೊತೆ ಚರ್ಚಿಸುತ್ತೇನೆ ಎಂದರು. ಸಭಾಧ್ಯಕ್ಷನಾಗಿ ಮೊದಲೇ ಬರಬೇಕು. ಎಲ್ಲಾ ವಿಧೇಯಕಗಳು ಸದನದಲ್ಲಿ ಮಂಡನೆಯಾಗುವಂತೆ ಮಾಡಬೇಕು. ಸರ್ಕಾರವೂ ಸಹ ಅಷ್ಟೇ ಕಾಳಜಿಯಿಂದ ಸ್ಪಂದಿಸಬೇಕು ಎಂದರು.

ಅಧಿವೇಶನ 10 ದಿನ ಇರಲಿದೆ. ಬಜೆಟ್ ಅಧಿವೇಶನದ ಬಳಿಕ ನಡೆಯುತ್ತಿದೆ. ಸದನವನ್ನು ಗಂಭೀರವಾಗಿ ನಡೆಸಲು ನಿರ್ಧರಿಸಿದ್ದು, ಸಿಎಂ, ವಿಪಕ್ಷ ನಾಯಕರು ಹಾಗೂ ಎಲ್ಲಾ ಶಾಸಕರಿಗೆ ಮನವಿ ಮಾಡಿದ್ದೇನೆ. ಯಾರೂ ಗೈರಾಗದೆ ಕಡ್ಡಾಯವಾಗಿ ಭಾಗಿಯಾಗಬೇಕು ಎಂದು ಸೂಚಿಸಿದರು.

ಸಾರ್ವಜನಿಕರ ವೀಕ್ಷಣೆಗೆ ಅವಕಾಶ: ಕೋವಿಡ್‌ ಕಾರಣದಿಂದ ವಿಧಾನಸಭೆಯ ಕಲಾಪ ವೀಕ್ಷಣೆಗೆ ಸಾರ್ವಜನಿಕರು ಬರುವುದನ್ನು ನಿರ್ಬಂಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ವೀಕ್ಷಣೆಗೆ ಅನುಮತಿ ನೀಡಲಾಗಿದೆ ಎಂದು ಸ್ಪೀಕರ್‌ ತಿಳಿಸಿದರು.

RELATED TOPICS:
English summary :Bangalore

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...