ಸುಪ್ರೀಂ ಕೋರ್ಟ್ ಸೂಚನೆಯಂತೆ ಅನಧಿಕೃತ ಧಾರ್ಮಿಕ ಸ್ಥಳಗಳ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ: ಶಾಸಕ ಎಸ್ಎ ರಾಮದಾಸ್ | ಜನತಾ ನ್ಯೂಸ್
ಮೈಸೂರು : ಹಿಂದೂ ದೇವಸ್ಥಾನ ತೆರವು ಕ್ರಮ ಸರಿಯಲ್ಲ ಎಂಬ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಎ ರಾಮದಾಸ್, ದೇವಸ್ಥಾನ ತೆರವು ವಿಚಾರದಲ್ಲಿ ಆ ಧರ್ಮ ಈ ಧರ್ಮ ಎಂಬುದೇನೂ ಇಲ್ಲ ಎಂದಿದ್ದಾರೆ.
ಹಿಂದೂ ದೇವಸ್ಥಾನ ತೆರವು ವಿಚಾರ ಕ್ರಮ ಸರಿಯಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ವಿಚಾರದಲ್ಲಿ ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ದೇವಸ್ಥಾನಗಳನ್ನು ಉಳಿಸಿಕೊಳ್ಳಲು ಯೋಚನೆ ಮಾಡಲಾಗುತ್ತಿದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆಯಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ. ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವು ಮಾಡುತ್ತಿಲ್ಲ ಎಂದು ರಾಮದಾಸ್ ನುಡಿದರು. ದೇವಾಲಯಗಳನ್ನು ಉಳಿಸಿಕೊಳ್ಳುವ ಅಥವಾ ಸ್ಥಳಾಂತರ ಸಾಧ್ಯವಾಗದಾದಾಗ ತೆರವು ಮಾಡಲಾಗುತ್ತಿದೆ ಎಂದು ರಾಮದಾಸ್ ಹೇಳಿದರು.
ನಾವು ಆದಷ್ಟು ಎಲ್ಲಾ ಧಾರ್ಮಿಕ ಕೇಂದ್ರಗಳನ್ನು ಉಳಿಸಿಕೊಳ್ಳಲು ಹಾಗೂ ಸ್ಥಳಾಂತರಿಸಲು ಪ್ರಯತ್ನ ನಡೆಸಿದ್ದೇವೆ. ಈ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತರುತ್ತೇವೆ. ಇದರಲ್ಲಿ ಒಂದು ಕ್ಷೇತ್ರ ಒಂದು ಧರ್ಮ ಎಂಬುವ ವಿಚಾರ ಇರುವುದಿಲ್ಲ ಎಂದು ರಾಮದಾಸ್ ತಿಳಿಸಿದ್ದಾರೆ.